ಕಲಬುರಗಿ | ಮಣಿಪುರ ಹಿಂಸಾಚಾರ ಖಂಡಿಸಿ ನಾನಾ ಸಂಘಟನೆಗಳ ಪ್ರತಿಭಟನೆ

Date:

Advertisements

ಮಣಿಪುರ ಹಿಂಸಾಚಾರ ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕಾನೂನು ಸುವ್ಯವಸ್ಥೆ ಇರಬೇಕಾದ ನಾಗರಿಕ ಸಮಾಜದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯಬಾರದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಆಳುವವರು ವಿಫಲರಾಗಿದ್ದಾರೆ. ಮಣಿಪುರ ಹಿಂಸಾಚಾರವನ್ನು ಕೂಡಲೇ ತಡೆಯಬೇಕು ಒಂದು ಒತ್ತಾಯಿಸಿ ನಾನಾ ಪಕ್ಷಗಳು ಹಾಗೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆಯನ್ನು ಖಂಡಿಸಿದರು. ಮಣಿಪುರದಲ್ಲಿ ಕಳೆದ 2 ತಿಂಗಳಿನಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು, ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ. ಮಹಿಳೆಯರು ಅತ್ಯಚಾರಕ್ಕೊಳಾಗಿ ಮಕ್ಕಳು ಅನಾಥರಾಗುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಮಣಿಪುರದಲ್ಲಿ ಶಾಂತಿ ಸ್ಥಾಪನೆಗಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಕೇವಲ ಮಹಿಳೆಯರ ಬಗ್ಗೆ ಮಾತನಾಡುತ್ತಿರುವ ಕೇಂದ್ರ-ರಾಜ್ಯ ಸರ್ಕಾರಗಳು ಅಲ್ಲಿನ ಮಹಿಳೆಯರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸ್ವಾತಂತ್ರ್ಯ ಪೂರ್ವದಿಂದ ಈವರೆಗೆ ಮಹಿಳೆಯ ಸಮಾನ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದೆವು. ಆದರೆ ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಇನ್ನೂ ಮಹಿಳೆಯರಿಗೆ ರಕ್ಷಣೆಯೇ ಸಿಕ್ಕಿಲ್ಲ ಎಂಬುದು ನಮಗೆ ಗೊತ್ತಾಗಿದೆ. ಬಿಲ್ಕಿಸ್ ಬಾನು ಪ್ರಕರಣವಾದಾಗ, ಹತ್ರಾಸ್ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆದಾಗ, ಮಹಿಳಾ ಕುಸ್ತಿಪಟುಗಳ ದೌರ್ಜನ್ಯ ನಡೆದಾಗ ನಮ್ಮ ದೇಶದ ಪ್ರಧಾನಮಂತ್ರಿ ಮಾತನಾಡಿದ್ದರೆ ಇಂದು ಇಂತಹ ಕೃತ್ಯ ಎಸಗಲು ದುಷ್ಟರು ಯೋಚಿಸುತ್ತಿದ್ದರು” ಎಂದು ಹೇಳಿದ್ದಾರೆ

Advertisements

“ಸಾಮೂಹಿಕ ಅತ್ಯಾಚಾರಕ್ಕೆ ಅಲ್ಲಿನ ಪೊಲೀಸರು ಪರೋಕ್ಷ ಬೆಂಬಲ ನೀಡಿದ್ದಾರೆ. ಮಣಿಪುರ ರಾಜ್ಯದಲ್ಲಿ ಇಂಟರ್‌ನೆಟ್ ಕಡಿತಗೊಳಿಸಿ ಅತ್ಯಾಚಾರ, ಹತ್ಯೆಗಳು, ಮಹಿಳೆಯರ ಬೆತ್ತಲೆ ಮೆರವಣಿಗೆಗಳಿಗೆ ಅಲ್ಲಿನ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡುವ ಮೂಲಕ ಅಲ್ಲಿ ಹಿಂಸಾಚಾರ ನಡೆಸಲು ಪರೋಕ್ಷ ಬೆಂಬಲ ನೀಡುತ್ತಿದೆ” ಎಂದು ಆರೋಪಿಸಿದರು.

“ಮಹಿಳೆಯರ ಮೇಲಿನ ಅತ್ಯಾಚಾರ ಘಟನೆ ನಡೆದು 2 ತಿಂಗಳಾದರೂ ಮಾತನಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನವನ್ನು ತೋರಿಸಿರುವುದು ಸರಿಯಾದ ಕ್ರಮವಲ್ಲ. ಸಾರ್ವಜನಿಕರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ , ಮೀನಾಕ್ಷಿ ಬಾಳಿ, ಮರೆಪ್ಪ ಹಳ್ಳಿ,ಭೀಮಶೆಟ್ಟಿ ಯಂಪಳಿ, ಸಾಯಿಬಣ್ಣ ಗುಡುಬಾ,ಮಲ್ಲಮ್ಮ, ಸುಭಾಷ್ ಹೋಸಮನಿ , ರಾಯಪ್ಪ ಹುರಮುಂಜಿ, ದಿಲೀಪ್ ಕುಮಾರ್ ನಾಗೂರೆ, ಕಾಶಿನಾಥ್ ಬಂಡಿ,ಜಾವೇದ್ ಹುಸೈನ್ , ನಾಗಯ್ಯಾ ಸ್ವಾಮಿ ಮೇಘರಾಜ ಕಠಾರೆ, ಸಿದ್ದು ಹರವಾಳ ಶೇಖಮ ಕುರಿ, ಮರೆಪ್ಪ ಚಟ್ಟೆರಕೇರಾ, ಡಾ.ಮಹೇಶಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X