ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

Date:

Advertisements

ಯುವಕನೋರ್ವ ಶೌಚಾಲಯದಲ್ಲೇ ಕುಳಿತು ಗುಜರಾತ್ ಹೈಕೋರ್ಟ್‌ನ ವಿಡಿಯೋ(ವರ್ಚುವಲ್) ಕಲಾಪದಲ್ಲಿ ಭಾಗವಹಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠವು ಕಳೆದ ಜೂನ್ 20ರಂದು ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ. ‘ಸಮದ್ ಬ್ಯಾಟರಿ’ ಎಂಬ ಹೆಸರಿನಲ್ಲಿ ಲಾಗಿನ್ ಆಗಿದ್ದ ಯುವಕ, ಕುತ್ತಿಗೆಗೆ ಬ್ಲೂಟೂತ್ ಇಯರ್‌ಫೋನ್ ಧರಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಶೌಚಾಲಯದ ಒಳಗಡೆ ಇದ್ದಾಗಲೇ ಕಲಾಪದ ವಿಡಿಯೋ ಆನ್ ಮಾಡಿಕೊಂಡಿದ್ದು, ಶೌಚ ಕಾರ್ಯ ಮುಗಿಸಿದ ಬಳಿಕ ನೀರನ್ನು ಹಾಕಿ ಸ್ವಚ್ಛಗೊಳಿಸಿಕೊಂಡು ನಂತರ ಹೊರಗೆ ಬರುವುದು ದಾಖಲಾಗಿದೆ.

Advertisements

ನ್ಯಾಯಾಲಯದ ದಾಖಲೆಗಳ ಪ್ರಕಾರ, ವಿಡಿಯೋದಲ್ಲಿರುವ ವ್ಯಕ್ತಿಯು ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಾಗಿದ್ದರು. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಪ್ರಕರಣದಲ್ಲಿ ಪ್ರತಿವಾದಿಯಾಗಿ ಹಾಜರಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರು ಸೌಹಾರ್ದಯುತವಾಗಿ ಪ್ರಕರಣವನ್ನು ಇತ್ಯರ್ಥಗೊಳಿಸುವುದಾಗಿ ತಿಳಿಸಿದ ನಂತರ, ನ್ಯಾಯಾಲಯವು ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು.

ಇದು ಅನುಚಿತ ವರ್ತನೆ. ಕಲಾಪಕ್ಕೆ ಭಾಗವಹಿಸುವಾಗ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬ ಸಾಮಾನ್ಯ ಪರಿಜ್ಞಾನ ಇಲ್ಲ. ಹಾಗಾಗಿ, ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಲು ನ್ಯಾಯಾಲಯವು ವಿಡಿಯೋದಲ್ಲಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಈ ಬಗ್ಗೆ ನ್ಯಾಯಾಲಯಗಳು ಕೂಡ ಕೆಲವೊಂದು ನಿಯಮಗಳನ್ನು ಕೂಡ ರಚಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ಆನ್‌ಲೈನ್ ನ್ಯಾಯಾಲಯದ ವಿಚಾರಣೆಯಲ್ಲಿ ಅನುಚಿತ ವರ್ತನೆಯ ನಿದರ್ಶನ ಇದೇ ಮೊದಲಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗುವಾಗ ಸಿಗರೇಟ್ ಸೇದುತ್ತಿದ್ದ ದೂರುದಾರನಿಗೆ ಗುಜರಾತ್ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ₹50,000 ದಂಡ ವಿಧಿಸಿತ್ತು.

ಅದೇ ರೀತಿ, ಮಾರ್ಚ್‌ನಲ್ಲಿ ದೆಹಲಿ ನ್ಯಾಯಾಲಯವು ವಿಡಿಯೋ ಕಾನ್ಫರೆನ್ಸ್ ಮೂಲಕ ತನ್ನ ಪ್ರಕರಣದಲ್ಲಿ ಹಾಜರಾಗುವಾಗ ಸಿಗರೇಟ್ ಸೇದುತ್ತಿದ್ದ ಕಕ್ಷಿದಾರನೋರ್ವನಿಗೆ ಸಮನ್ಸ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X