ಶಿವಮೊಗ್ಗ | ರಾಜ್ಯ ಚೆಸ್ ಟೂರ್ನಿ ಉದ್ಘಾಟನೆ ; ಮನಸ್ಸನ್ನು ಕೇಂದ್ರೀಕರಿಸಲು ಚೆಸ್ ಆಟ ಅತ್ಯಗತ್ಯ : ಸಿಪಿಐ ಸಂತೋಷ್ ಕುಮಾರ್ ಡಿ ಕೆ

Date:

Advertisements

ಶಿವಮೊಗ್ಗ ಚೆಸ್‌ನಲ್ಲಿ ಒತ್ತಡದಲ್ಲಿ ಯೋಚನೆ ಮಾಡುವ ಶಕ್ತಿಯಿದೆ. ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಗುಣವಿದೆ. ಪ್ರತಿ ಹಂತದಲ್ಲೂ ಸಮಸ್ಯೆಯನ್ನೆದುರಿಸುವ ಸಂದರ್ಭವಿದೆ. ಇಂತಹ ಸಮಸ್ಯೆ ಮೂಲಕವೇ ಸಮರ್ಪಕ ಉತ್ತರ ಕಂಡುಕೊಳ್ಳುವ ಆಟ ಚೆಸ್ ಆಗಿದೆ ಎಂದು ಜೆಸಿಐ ಇಂಡಿಯಾದ ಝೋನ್-೨೪ರ ಅಧ್ಯಕ್ಷ ಗೌರೀಶ್ ಭಾರ್ಗವ್ ಹೇಳಿದರು.

ಅವರು ಶುಕ್ರವಾರ ನಗರದಲ್ಲಿ ಆರಂಭವಾದ ೧೯ರ ಒಳಗಿನವರ ರಾಜ್ಯಮಟ್ಟದ ಚೆಸ್ ಚಾಂಪಿಯನ್ ಶಿಪ್‌ಟೂರ್ನಿಯನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದರು. ಚೆಸ್ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕನಾಗುವ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಇದರಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಯಾವೆಲ್ಲ ಗುಣಗಳು ಬೇಕೋ ಅವೆಲ್ಲವೂ ಇವೆ. ಈ ಆಟದ ಮೂಲಕ ಹೆಸರುಗಳಿಸಿ ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು.

ವಿದ್ಯಾರ್ಥಿ ದೆಸೆಯಿಂಸಲೇ ಉತ್ತಮ ಹವ್ಯಾಸದ ಆಟಗಳನ್ನು ರೂಢಿಸಿಕೊಂಡು ಸ್ಪರ್ಧಾ ಮನೋಭಾವದಿಂದ ಆಡುವುದು ಮುಖ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿದ್ದ ವಿನೋಬನಗರ ಸಿಪಿಐ ಡಿ ಕೆ ಸಂತೋಷ್‌ಕುಮಾರ್, ಚೆಸ್ ಉತ್ತಮ ಹವ್ಯಾಸದ ಆಟ. ಮನಸ್ಸನ್ನು ಕೇಂದ್ರೀಕರಿಸಲು ಇದು ಅತ್ಯಗತ್ಯ ಎಂದರು.

Advertisements

ಕ್ರೀಡಾ ಮತ್ತು ಸ್ಪರ್ಧಾ ಮನೋಭಾವದಿಂದ ಆಟವನ್ನು ಆಡಿದರೆ ಯಶಸ್ಸು ಸಾಧ್ಯ. ಮಕ್ಕಳು ಬಾಲ್ಯದಿಂದಲೇ ಇಂತಹ ಆಟದ ಮೂಲಕ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕೆಂದರು.

ವೇದಿಕೆಯಲ್ಲಿ ಜೆಸಿಐ ಝೋನ್-೨೪ರ ಸಂಭಾವ್ಯ ಉಪಾಧ್ಯಕ್ಷ ಪ್ರಮೋದ ಶಾಸ್ತ್ರಿ, ಚಾಣಕ್ಯ ಚೆಸ್ ಸ್ಕೂಲ್ ಮುಖ್ಯಸ್ಥ ವಿಲ್ಸನ್ ಅಂದ್ರಾದೆ, ಮುಖ್ಯ ತೀರ್ಪುಗಾರ ಪ್ರಾಣೇಶ್ ಯಾದವ್, ಶಿವಮೊಗ್ಗ ಚೆಸ್ ಅಸೋಸಿಯೇಶನ್ ಕಾರ್ಯದರ್ಶಿ ಸಚಿನ್, ಕುಂದಾಪುರದ ಕಾಶ್ವಿ ಚೆಸ್ ಸ್ಕೂಲ್‌ನ ನರೇಶ್, ಚಿರಂತನ್ ಜೆಸಿಐನ ಕಾರ್ಯದರ್ಶಿ ವೈಷ್ಣವಿ, ಚಾಣಕ್ಯ ಚೆಸ್‌ನ ಆಶಾ ಅಂದ್ರಾದೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X