ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ, ತೇಜಸ್ವಿ ಯಾದವ್‌ ಬಿಹಾರ ಮುಖ್ಯಮಂತ್ರಿ: ಕನ್ಹಯ್ಯಾ ಕುಮಾರ್

Date:

Advertisements

ಬಿಹಾರ ಮೈತ್ರಿಕೂಟ ‘ಮಹಾಘಟಬಂಧನ’ದಲ್ಲಿ ಯಾವುದೇ ಗೊಂದಲವಿಲ್ಲ. ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ. ಮುಂದಿನ ಚುನಾವಣೆಯಲ್ಲಿ ಮೈತ್ರಿಕೂಟ ಬಹುಮತ ಪಡೆದರೆ ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಆರ್‌ಜೆಡಿ ದೊಡ್ಡ ಪಕ್ಷ, ಹೆಚ್ಚಿನ ಶಾಸಕರನ್ನು ಹೊಂದಿದೆ. ಅದು ‘ಮಹಾಘಟಬಂಧನ’ಕ್ಕೆ ನಾಯಕತ್ವವನ್ನು ಒದಗಿಸುತ್ತದೆ. ಅವರಿಗೆ ವಿರೋಧ ಪಕ್ಷದ ನಾಯಕನ ಹುದ್ದೆ ಇದೆ ಎಂಬುದು ನಿಜ. ಸ್ವಾಭಾವಿಕವಾಗಿ, ಅದು ಅವರ ಜವಾಬ್ದಾರಿ” ಎಂದರು.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Advertisements

“ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಗಳಿಗಿಂತ ಈ ಬಾರಿ ಬದಲಾವಣೆಯ ಗಾಳಿ ಹೆಚ್ಚಾಗಿದೆ. ಬಿಜೆಪಿ ಆಪರೇಷನ್ ಸಿಂಧೂರವನ್ನು ಚುನಾವಣಾ ವಿಚಾರವಾಗಿ ಬಳಸುತ್ತಿಲ್ಲ. ಯಾಕೆಂದರೆ ಈಗಾಗಲೇ ಜನರಿಗೆ ಇದು ದೇಶದ ಗೌರವದ ವಿಚಾರವೆಂದು ತಿಳಿದಿದೆ. ಯಾವುದೇ ಪಕ್ಷವು ಈ ವಿಚಾರವನ್ನು ರಾಜಕೀಯಗೊಳಿಸಬಾರದು” ಎಂದು ಹೇಳಿದರು.

ಕಾಂಗ್ರೆಸ್ ಚುನಾವಣೆಯಲ್ಲಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ, “ಮೈತ್ರಿಕೂಟದ ಎಲ್ಲಾ ಪಕ್ಷಗಳೂ 243 ಸ್ಥಾನಗಳಲ್ಲಿಯೂ ಒಟ್ಟಾಗಿ ಸ್ಪರ್ಧಿಸಲಿದೆ. ಆರ್‌ಜೆಡಿ, ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಸಹಾನಿ ಜಿ ಅವರ ಪಕ್ಷವು ಒಟ್ಟಾಗಿ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತವೆ. ಯಾರಿಗೆ ದೊಡ್ಡ ಜವಾಬ್ದಾರಿ ಇದೆಯೋ ಅವರು ಜವಾಬ್ದಾರಿ ನಿರ್ವಹಿಸುತ್ತಾರೆ. ಯಾರಿಗೆ ಹೆಚ್ಚು ಜವಾಬ್ದಾರಿ ಇಲ್ಲವೋ ಏನೆಲ್ಲ ನಿರ್ವಹಿಸಬೇಕೋ ಅದನ್ನು ನಿರ್ವಹಿಸುತ್ತಾರೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X