ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

Date:

Advertisements

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ ವ್ಯಕ್ತಪಡಿಸಿದೆ.

ಎನ್‌ಸಿಪಿ ಅಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದು, 1ನೇ ತರಗತಿಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿದೆ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ವಿಪಕ್ಷಗಳು ತೀವ್ರವಾಗಿ ವಿರೋಧಿಸಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

Advertisements

“ಮಹಾರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿದೆ, ಹಾಗಾಗಿ ನಾವು ಮಹಾರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿರುವಾಗ, ನಾವು ರಾಜಕೀಯ ಮಾರ್ಗಗಳನ್ನು ಬದಿಗಿಟ್ಟು ರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ಅದು ಎನ್‌ಸಿಪಿಯ ಮೂಲ ನೀತಿಯಾಗಿದೆ” ಎಂದು ಎನ್‌ಸಿಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಹೇಳಿದ್ದಾರೆ.

“ಮಗುವಿನ ಮಾತೃಭಾಷೆಯಲ್ಲಿ ಆರಂಭಿಕ ಶಿಕ್ಷಣ ನಡೆಯಬೇಕೆಂದು ವಾದಿಸುವ ಶಿಕ್ಷಣ ತಜ್ಞರು, ಪೋಷಕರು, ಭಾಷಾಶಾಸ್ತ್ರಜ್ಞರು ಮತ್ತು ಕಾರ್ಯಕರ್ತರು ಈ ಕ್ರಮವನ್ನು ವಿರೋಧಿಸಿದ್ದಾರೆ” ಎಂದೂ ಈ ಸಂದರ್ಭದಲ್ಲೇ ಪಾಟೀಲ್ ತಿಳಿಸಿದರು.

“ಮರಾಠಿ ಜನರು ಹಿಂದಿ ಸೇರಿದಂತೆ ಬೇರೆ ಯಾವುದೇ ಭಾಷೆಗಳನ್ನು ಕಲಿಯುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಪ್ರಾಥಮಿಕ ಹಂತದಲ್ಲಿ ಮಕ್ಕಳ ಮೇಲೆ ಹಿಂದಿಯನ್ನು ಕಡ್ಡಾಯವಾಗಿ ಹೇರಿಕೆ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಎನ್‌ಸಿಪಿ ಹೇಳಿದೆ.

ಇದನ್ನು ಓದಿದ್ದೀರಾ? ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗದು: ಹಿಂದಿ ಹೇರಿಕೆ ವಿರುದ್ಧ ಸುಪ್ರಿಯಾ ಸುಳೆ ಆಕ್ರೋಶ

“ತ್ರಿಭಾಷಾ ನೀತಿಯನ್ನು ಮಾತೃಭಾಷೆಯನ್ನು ಬದಿಗಿಡಲು ಒಂದು ಸಾಧನವಾಗಿ ಬಳಸುತ್ತಿದ್ದರೆ, ಮರಾಠಿ ಮಾತನಾಡುವ ಸಮುದಾಯವು ಅಂತಹ ಕ್ರಮಗಳನ್ನು ಒಗ್ಗಟ್ಟಿನಿಂದ ವಿರೋಧಿಸುತ್ತದೆ” ಎಂದು ಪಾಟೀಲ್ ತಿಳಿಸಿದ್ದಾರೆ.

ಹಿಂದಿ ಹೇರಿಕೆ ವಿರುದ್ಧವಾಗಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈಗಾಗಲೇ ಹಿಂದಿ ಹೇರಿಕೆ ವಿರುದ್ಧ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜೊತೆಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X