ರಾಯಚೂರು | ನಗರಸಭೆ 16 ಲಕ್ಷ ರೂ. ಬಾಕಿ ಉಳಿಸಿಕೊಂಡಿದೆ: ರವೀಂದ್ರ ಜಲ್ದಾರ್ ಆರೋಪ

Date:

Advertisements

ರಾಯಚೂರಿನ ಈರಣ್ಣ ವೃತ್ತದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಜಿಲ್ಲಾಧಿಕಾರಿ ಸ್ಥಳಾಂತರಿಸಿದ್ದಾರೆ. ಅಧಿಕೃತ ಟೆಂಡರ್‌ ಕರೆದು ಈರಣ್ಣ ವೃತ್ತದಲ್ಲಿ ಮಾರುಕಟ್ಟೆ ನಡೆಸಲಾಗುತ್ತಿತ್ತು. ಈಗ ಮಾರುಕಟ್ಟೆ ಸ್ಥಳಾಂತರವಾಗಿದೆ. ಅಲ್ಲದೆ, ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಕೊಡಬೇಕಾದ 16 ಲಕ್ಷ ರೂ.ಗಳನ್ನು ನಗರಸಭೆ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಮುಖಂಡ ರವೀಂದ್ರ ಜಲ್ದಾರ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೊರೊನಾ ಸಂದರ್ಭದಲ್ಲಿ ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟ ಪ್ರಾರಂಭಿಸಲಾಗಿತ್ತು. ಆಗಿನಿಂದಲೂ ಯಾವುದೇ ರಸ್ತೆ ಅಪಘಾತ ಸಂಭವಿಸಿಲ್ಲ. ಜನರಿಗೆ ತೊಂದರೆಯೂ ಆಗಿಲ್ಲ. ವ್ಯಾಪಾರ ಬೆಳಿಗಿನ ಜಾವ ಪ್ರಾರಂಭವಾಗಿ 9 ಗಂಟೆ ವೇಳೆಗೆ ಸ್ಥಗಿತಗೊಳ್ಳುತ್ತಿತ್ತು. ಆದರೆ, ನಗರಸಭೆಯೇ ಟೆಂಡರ್ ಕರೆದು ಅಧಿಕೃತವಾಗಿ ಮಾರಾಟಕ್ಕೆ ಅವಕಾಶ ನೀಡಿತ್ತು. ಇದೀಗ, ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಏಕಾಏಕಿ ಮಾರುಕಟ್ಟೆಯನ್ನು ನಗರಸಬೆ ತೆರವುಗೊಳಿಸಿದೆ” ಎಂದು ಆರೋಪಿಸಿದ್ದಾರೆ.

“ಜಿಲ್ಲಾಡಳಿತದ ನಿರ್ಧಾರದಿಂದ ವ್ಯಾಪಾರಿಗಳು ಬೀದಿಗೆ ಬರುವಂತಾಗಿದೆ. ತರಕಾರಿ ಮಾರಾಟಗಾರರ ಸಂಘದ ಅಧ್ಯಕ್ಷ ಎಂದು ಹೇಳಿಕೊಂಡು ಎನ್ ಮಹಾವೀರ ಎಂಬವರು ನಗರಸಭೆ ಆದಾಯಖೋತಾ ಆಗುವಂತೆ ಮಾಡಿದ್ದಾರೆ. 2019 ರಿಂದ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿಗಳ ಬಾಡಿಗೆ ಹಣ ಸೇರಿ, 16 ಲಕ್ಷ ರೂ.ಗಳನ್ನು ನಗರಸಭೆ ಪಾವತಿಸಿಲ್ಲ” ಎಂದು ದೂರಿದ್ದಾರೆ.

Advertisements

“ಈರಣ್ಣ ವೃತದಲ್ಲಿಯೇ ತರಕಾರಿ ಮಾರಾಟಕ್ಕೆ ಅವಕಾಶ ನೀಡಲು ನ್ಯಾಯಾಲಯದ ಮೊರೆ ಹೋಗಲಾಗಿದದೆ. ನ್ಯಾಯಾಲಯ ಆದೇಶದ ನಂತರ ತರಕಾರಿ ಮಾರಾಟ ಪ್ರಾರಂಭಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯ ಸಾಜೀದ್ ಸಮೀರ್, ಶಂಕರರೆಡ್ಡಿ, ಅಲಂಪಾಷಾ, ಜಾನಕಿರಾಮ್, ವೆಂಕಪ್ಪ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X