ಕಲಬುರಗಿ | ಅನಧಿಕೃತ ಬೈಕ್, ಟ್ಯಾಕ್ಸಿ, ಆಟೋಗಳ ಸಂಚಾರ ತಡೆಯಲು ಆಗ್ರಹ

Date:

Advertisements

ಅನಧಿಕೃತ ಬೈಕ್, ಟ್ಯಾಕ್ಸಿ ಮತ್ತು ಅನಧಿಕೃತ ಆಟೋಗಳ ಸಂಚಾರ ತಡೆಯುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಆಟೋ ಚಾಲಕರ ಸಂಘ (ರಿ) ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

‘ಕಲಬುರಗಿ ನಗರದಲ್ಲಿ ಅನಧಿಕೃತವಾಗಿ ಬೈಕ್‌, ಟ್ಯಾಕಿ ಸೇವೆ ನೀಡುತಿದ್ದಾರೆ. ಈ ಹಾವಳಿಯಿಂದ ಪರವಾನಿಗೆ ಪಡೆದ ಆಟೋ ಚಾಲಕರಿಗೆ ತುಂಬಾ ತೊಂದರೆ ಆಗುತ್ತಿದೆ. ಮೊದಲೇ ಸರಕಾರದ ಶಕ್ತಿ ಯೋಜನೆಯಿಂದ ಶೇ 50ರಷ್ಟು ಆದಾಯ ಕುಸಿದಿದೆ ಎಂದು ಹೇಳಿದರು.

ʼಒಂದು ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಆಟೋಗಳಿದ್ದು, ತಾಲೂಕು ಪರವಾನಿಗೆ ಪಡೆದು ನಗರದಲ್ಲಿ ಸಂಚರಿಸುತ್ತಿರುವ ಸುಮಾರು ಎರಡು ಸಾವಿರ ವರೆಗೆ ಆಟೋಗಳಿವೆ. ಇದರಿಂದ ನಗರ ಪರವಾನಿಗೆ ಪಡೆದ ಆಟೋ ಚಾಲಕರಿಗೆ ಮನೆ ಬಾಡಿಗೆ, ಮಕ್ಕಳ ಶಾಲಾ ಶುಲ್ಕ ಮತ್ತು ಆಟೋಗಳ ಬ್ಯಾಂಕ್‌ ಸಾಲ ಪಾವತಿಸಲು ತುಂಬಾ ಸಮಸ್ಯೆಯಾಗುತ್ತಿದ್ದು, ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ’ ಎಂದು ಅಳಲು ತೋಡಿಕೊಂಡರು.

Advertisements
WhatsApp Image 2025 06 28 at 7.33.31 AM
ಮನವಿ ಪತ್ರ ಸಲ್ಲಿಸಿದರು.

‘ನಗರದಲ್ಲಿ ಸಂಚರಿಸುತ್ತಿರುವ ಅನಧಿಕೃತ ಬೈಕ್‌, ಟ್ಯಾಕ್ಸಿ ಮತ್ತು ಅನಧಿಕೃತ ಆಟೋಗಳ ಸಂಚಾರ ಕೂಡಲೇ ತಡೆದು ನಗರ ಪರವಾನಿಗೆ ಪಡೆದ ಆಟೋ ಚಾಲಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ : ಕಲಬುರಗಿ | ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಆಟೋ ಚಾಲಕರ ಸಂಘದ ಪ್ರಮುಖರಾದ ಲಕ್ಷ್ಮೀಕಾಂತ ಆರ್ ಮಾಲಿಪಾಟೀಲ್, ಪರಶುರಾಮ ಕೋಸಗಿ, ಎಮ್.ಡಿ.ಹುಸೇನ್, ಹಣಮಂತ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X