ಬೆಳಗಾವಿ : ಚಿನ್ನದ ಸರ ವಂಚನೆ ಪ್ರಕರಣ – ಆರೋಪಿಯ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು.

ಹಿಡಕಲ್ ಗ್ರಾಮದ ರುಕ್ಷ್ಮವ್ವ ಕಾಂಬಳೆ ಎಂಬುವವರ ಬ್ಯಾಂಕ್ ಖಾತೆಗೆ ₹40,000 ಹಣ ಜಮೆಯಾಗಿದೆ ಎಂದು ತಿಳಿಸಿ, ಅದನ್ನು ಅಳಗವಾಡಿ ಬ್ಯಾಂಕ್‌ನಲ್ಲಿ ವಿತ್‌ಡ್ರಾ ಮಾಡಿಕೊಡುತ್ತೇನೆ ಎಂದು ಹೇಳಿ ಮಹಿಳೆಯನ್ನು ಹಿಡಕಲ್ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದ. ನಂತರ “ಕೊರಳಲ್ಲಿ ಚಿನ್ನದ ಸರ ಇದ್ದರೆ ಬ್ಯಾಂಕ್ ಹಣ ಬಿಡುಗಡೆ ಮಾಡುವುದಿಲ್ಲ” ಎಂದು ನಂಬಿಸಿ, ಬೊರಮಾಳ ಸರ ಎಗರಿಸಿ ಪರಾರಿಯಾಗಿದ್ದ.

ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯ ಸಿಪಿಐ ರತನ್ ಕುಮಾರ್ ಜೀರಗ್ಯಾಳ, ಪಿಎಸ್‌ಐ ಮಾಳಪ್ಪ ಪೂಜಾರಿ, ಅಪರಾಧ ವಿಭಾಗದ ಪಿಎಸ್‌ಐ ಶಿವಾನಂದ ಕಾರಜೋಳ ಹಾಗೂ ಸಿಬ್ಬಂದಿ ತಂಡವು ಕೋಲ್ಹಾಪುರ ಮೂಲದ ದಸ್ತಗೀರ ಶೇಖ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Advertisements

ಪೊಲೀಸರ ತನಿಖೆ ವೇಳೆ, ದಸ್ತಗೀರ ಶೇಖ್ ಈ ಹಿಂದೆ ಎಂಟು ಕಡೆಗಳಲ್ಲಿ ವಂಚನೆ ಮಾಡಿದಿರುವುದು ಬೆಳಕಿಗೆ ಬಂದಿದೆ. ಈವರೆಗೂ ಹಲವಾರು ಪ್ರಕರಣಗಳಲ್ಲಿ ಆರೋಪಿ ಪಾಲ್ಗೊಂಡಿದ್ದು, ಮೀರಜ್ ಮಾರ್ಗದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಚಿನ್ನದ ತಾಳಿ ಕಳುವಾದ ಪ್ರಕರಣವೂ ಆರೋಪಿಗೆ ಸಂಬಂಧಿಸಿದ್ದಾಗಿದೆ.

ಈ ಸುದ್ದಿ ಓದಿದ್ದಿರಾ?.ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡ ದೇವಸ್ಥಾನ ಹುಂಡಿಯಲ್ಲಿ ₹1.4 ಕೋಟಿ ಕಾಣಿಕೆ ಸಂಗ್ರಹ

ಈ ಪ್ರಕರಣದಲ್ಲಿ ಚಿಕ್ಕೋಡಿ ಮೂಲದ ಕುಶಪ್ಪ ತಳವಾರ ಎಂಬ ಮತ್ತೊಬ್ಬ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X