ಕೊಲ್ಕತ್ತಾದಲ್ಲಿ ಮತ್ತೊಂದು ಅತ್ಯಾಚಾರ ಕೃತ್ಯ; ಕಾಲು ಹಿಡಿದು ಬೇಡಿಕೊಂಡರೂ ಬಿಡದ ಕಾಮುಕರು

Date:

Advertisements

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶ ಕಾರಣವಾಗಿತ್ತು. ಆ ಘಟನೆಯ ಆತಂಕ ಮಾಸುವ ಮುನ್ನವೇ ಕೋಲ್ಕತ್ತಾದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೃತ್ಯ ಬುಧವಾರ ತಡರಾತ್ರಿ ನಡೆದಿದೆ. ಕೃತ್ಯದ ಬಗ್ಗೆ ಪೊಲೀಸರ ಬಳಿ ಮೊದಲ ಬಾರಿಗೆ ಹೇಳಿಕೆ ದಾಖಲಿಸಿರುವ ಸಂತ್ರಸ್ತೆ, ‘ಕಾಲು ಹಿಡಿದು ಬೇಡಿಕೊಂಡರೂ ಕಾಮುಕರು ಬಿಡಲಿಲ್ಲ’ ಎಂದು ಹೇಳಿದ್ದಾರೆ.

ಬುಧವಾರ ತಡರಾತ್ರಿ, ಕೊಲ್ಕತ್ತಾ ಕಾನೂನು ಕಾಲೇಜಿನ ಸೆಕ್ಯುರಿಟಿ ಕೊಠಡಿಯಲ್ಲಿ ಮೂವರು ಕಾಮುಕರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕಾಲೇಜಿನ ಸೆಕ್ಯುರಿಟಿಗೆ ಬೆದರಿಕೆ ಹಾಕಿ, ಆತನನ್ನು ಕೊಠಡಿಯಿಂದ ಹೊರ ಕಳಿಸಿ, ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿರುವ ಸಂತ್ರಸ್ತೆ, “ಬುಧವಾರ ಸಂಜೆ ಟಿಎಂಸಿ ವಿದ್ಯಾರ್ಥಿ ವಿಭಾಗದ ಸಭೆ ಇತ್ತು. ಸಭೆಯ ಬಳಿಕ ಹಾಸ್ಟೆಲ್‌ಗೆ ತೆರಳುವಾಗ ‘ಜೆ, ಎಂ ಮತ್ತು ಪಿ’ ಎಂಬ ಅಕ್ಷರಗಳಿಂದ ಗುರುತಿಲಾದ ಮೂವರು ನನ್ನನ್ನು ಎಳೆದೊಯ್ದರು. ‘ಜೆ’ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ್ದು, ‘ಎಂ ಮತ್ತು ಪಿ’ ಎಂಬವರು ಕೃತ್ಯವನ್ನು ನೋಡುತ್ತ ನಿಂತಿದ್ದರು” ಎಂದು ವಿವರಿಸಿದ್ದಾರೆ

Advertisements

“ಕಾಮುಕರ ದಾಳಿಯನ್ನು ನಾನು ವಿರೋಧಿಸಿದೆ. ಅವರ ಕಾಲು ಹಿಡಿದು ಬೇಡಿಕೊಂಡೆ. ಆದರೆ, ಅವರು ನನ್ನನ್ನು ಬಿಡಲಿಲ್ಲ” ಎಂದು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನೂ ಬಂಧಿಸಿದ್ದಾರೆ.

ಬಂಧಿತರನ್ನು ಮನೋಜಿತ್ ಮಿಶ್ರಾ (ಮಾಜಿ ವಿದ್ಯಾರ್ಥಿ ಮತ್ತು ತಾತ್ಕಾಲಿಕ ಸಿಬ್ಬಂದಿ), ಝೈಬ್ ಅಹ್ಮದ್ (ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿ), ಹಾಗೂ ಪ್ರಮಿತ್ ಮುಖರ್ಜಿ (ಇನ್ನೊಬ್ಬ ವಿದ್ಯಾರ್ಥಿ) ಎಂದು ಗುರುತಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X