ಹಾವೇರಿ | ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು: ಸಂತೋಷ ಗುಡ್ಡಪ್ಪನವರ

Date:

Advertisements

“ಕೊಲೆ, ಅತ್ಯಾಚಾರ, ಹಲ್ಲೆ, ಸುಲಿಗೆ, ಹಿಂಸಾಚಾರಗಳು ದಿನೇ ದಿನೇ ಹಾವೇರಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ,ಜಿಲ್ಲೆಯ ಜನರು ಭಯಭೀತರಾಗಿ ಜೀವನ ನಡೆಸುವಂತ ಸ್ಥಿತಿ ಜಿಲ್ಲೆಯ ಜನರಿಗೆ ಬಂದೊದಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು” ಎಂದು ಡಿ.ಎಸ್.ಎಸ್ ಅಂಬೇಡ್ಕರ್ ಧ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಗುಡ್ಡಪ್ಪನವರ ಒತ್ತಾಯಿಸಿದರು.

ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ಚಂದ್ರಕಾಂತ ಬಣ) ವತಿಯಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ, ಕೃತ್ಯಗಳನ್ನು ನಡೆಸುತ್ತಿರುವ ಕ್ರಿಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ  ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಹಾವೇರಿ ನಗರದಲ್ಲಿ ಜೂನ್ 9 ರಂದು ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳು ಜಾಮೀನು ಮೇಲೆ ಬಿಡುಗಡೆಗೊಂಡರೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು. 

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಈ ಸಂದರ್ಭದಲ್ಲಿ ಕೆ.ಆರ್.ಡಿ.ಎಸ್.ಎಸ್ ಅಂಬೇಡ್ಕರ್ ದ್ವನಿ ಜಿಲ್ಲಾ ಅಧ್ಯಕ್ಷರು ಫಕ್ಕಿರೇಶ್ ಪುರದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಬಣಕಾರ್, ಜಿಲ್ಲಾ ಗೌರವ ಅಧ್ಯಕ್ಷರು ಮಾಲತೇಶ್ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರು ಚನ್ನಪ್ಪ ಹರಿಜನ, ಜಿಲ್ಲಾ ಯುವ ಘಟಕ ಅಧ್ಯಕ್ಷರು ಲಕ್ಷ್ಮಣ್ ರಾಮಣ್ಣನವರ್, ಹಾವೇರಿ ತಾಲೂಕ ಅಧ್ಯಕ್ಷರುಮಾಲ್ತೇಶ್ ತಳಗೇರಿ, ಬ್ಯಾಡಗಿ ತಾಲೂಕ ಅಧ್ಯಕ್ಷರು ಕುಮಾರ್ ಮಾಳಗಿ, ಬ್ಯಾಡಗಿ ತಾಲೂಕ ಎಸ್ ಟಿ ಘಟಕದ ಅಧ್ಯಕ್ಷರು ರಮೇಶ್ ಹೇಡಿಗೊಂಡ, ಹಾನಗಲ್ ತಾಲೂಕ ಅಧ್ಯಕ್ಷರು ಮಂಜುನಾಥ ಹರಿಜನ್, ಹಾನಗಲ್ ತಾಲೂಕ ಯುವ ಘಟಕ ಅಧ್ಯಕ್ಷರು ಮೈಲಾರಪ್ಪ ಹರಿಜನ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X