ಕಲಬುರಗಿ | ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಜೆಡಿಎಸ್ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ಸೇಡಂನ ಮಳಖೇಡದ ಸೇತುವೆ ಕಾಮಗಾರಿ ಕಳೆದ ಏಳೆಂಟು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ರಾಜ್ಯ ಹೆದ್ದಾರಿಯಲ್ಲಿರುವ ಈ ಸೇತುವೆಯು ಪ್ರಮುಖ ನಗರಗಳಿಗೆ ಸಂಪರ್ಕ ಬೆಸೆಯುತ್ತಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಜೆಡಿಎಸ್‌ ಮುಖಂಡ ಬಾಲರಾಜ್ ಗುತ್ತೇದಾರ ಆಗ್ರಹಿಸಿದ್ದಾರೆ.

ಮಳಖೇಡ ಸೆತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, “ಸೇಡಂನಿಂದ ಕಲಬುರಗಿ ಹಾಗೂ ಕಲಬುರಗಿಯಿಂದ ಹೈದ್ರಬಾದ್‌ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ರಸ್ತೆ ಈ ಸೇತುವೆ ಮೂಲಕ ಹಾದುಹೋಗಿದ್ದು, ಕಾಮಗಾರಿ ಪೂರ್ಣಗೊಳ್ಳದೆ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ” ಎಂದು ಹೇಳಿದ್ದಾರೆ.

“ಮಳೆ ಬಂದಾಗ ಹಳೇ ಸೆತುವೆ ಸಂಪೂರ್ಣ ಮುಳುಗಡೆ ಆಗುತ್ತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗೀತವಾಗುತ್ತಿದೆ. ಇದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತಿದೆ. ಮಾಜಿ ಶಾಸಕರು ಹಾಗೂ ಈಗಿನ ಸಚಿವರ ಇಚ್ಛಾಶಕ್ತಿ ಕೊರತೆಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಇನ್ನೂ 20% ಕಾಮಗಾರಿ ಬಾಕಿ ಇದೆ. ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ವೇಳೆಗೆ ಕಾಮಗಾರಿ ಪೂರ್ಣಗೊಳಿಸಬಹುದಾಗಿತ್ತು. ಆದರೆ, ಎಲ್ಲರೂ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ” ಎಂದು ಆರೋಪಿಸಿದರು.

Advertisements

ಕಾಮಗಾರಿ ವೀಕ್ಷಣೆ ವೇಳೇ, ಜೆಡಿಎಸ್ ಮುಖಂಡ ಮಸ್ತಾನ ಮಳಖೇಡ, ದೇವಪ್ಪಾ, ಜಾವೀದ, ಮೌಲನಾಸಾಬ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X