ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ: ಮಾಯಾವತಿ

Date:

Advertisements

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡುತ್ತಿದೆ. ಸಂವಿಧಾನವನ್ನು ತಿರುಚಿದರೆ ಬಿಎಸ್‌ಪಿ ಸುಮ್ಮನಿರಲ್ಲ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಶನಿವಾರ ಹೇಳಿದ್ದಾರೆ.

‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಪೀಠಿಕೆಯಿಂದ ತೆಗೆದುಹಾಕಬೇಕೆಂಬ ಬಿಜೆಪಿ, ಆರ್‌ಎಸ್‌ಎಸ್‌ ಬೇಡಿಕೆಗಳ ಕುರಿತ ಮಾಧ್ಯಮಗಳ ಪ್ರಶ್ನೆಗೆ ಲಕ್ನೋದಲ್ಲಿ ಪ್ರತಿಕ್ರಿಯಿಸಿದ ಮಾಯಾವತಿ, “ಈಗ ಆರ್‌ಎಸ್‌ಎಸ್‌ನವರು, ಬಿಜೆಪಿಯವರು, ಕಾಂಗ್ರೆಸ್‌ನವರು ಏನು ಹೇಳುತ್ತಾರೆ ಎಂಬ ಬಗ್ಗೆ ಏನೂ ಹೇಳಲು ಬಯಸಲ್ಲ. ಆದರೆ ಸಂವಿಧಾನವನ್ನು ತಿರುಚಿದರೆ ನಮ್ಮ ಬಿಎಸ್‌ಪಿ ಪಕ್ಷ ಸುಮ್ಮನಿರಲ್ಲ. ಅದರ ವಿರುದ್ಧ ಪ್ರತಿಭಟಿಸಲು ಬೀದಿಗಿಳಿಯುತ್ತೇವೆ. ಎಲ್ಲವನ್ನೂ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ನಾಳಿನ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಭಾಗವಹಿಸದಿರಲು ಮಾಯಾವತಿ ನಿರ್ಧಾರ

Advertisements

“ಡಾ. ಭೀಮರಾವ್ ಅಂಬೇಡ್ಕರ್ ಅವರು ತಮ್ಮ ಜೀವಮಾನದ ಅವಿಶ್ರಾಂತ ಹೋರಾಟಗಳ ಅನುಭವಗಳ ಆಧಾರದ ಮೇಲೆ, ದೇಶಕ್ಕೆ ಅತ್ಯಂತ ಮಾನವೀಯ ಸಂವಿಧಾನವನ್ನು ನೀಡಿದರು. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್, ಈಗ ಕೆಲವು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸಂವಿಧಾನವನ್ನು ಪೂರ್ಣ ಪ್ರಮಾಣದಲ್ಲಿ ಎಂದಿಗೂ ಜಾರಿಗೆ ತಂದಿಲ್ಲ” ಎಂದು ದೂರಿದ್ದಾರೆ.

“ಈ ಎರಡೂ ಪಕ್ಷಗಳು ಮತ್ತು ಅವರ ಬೆಂಬಲಿಗರು ತಮ್ಮ ಪಕ್ಷದ ಸಿದ್ಧಾಂತ ಮತ್ತು ರಾಜಕೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಸಂವಿಧಾನದಲ್ಲಿ ಅನೇಕ ಅನಗತ್ಯ ಬದಲಾವಣೆಗಳನ್ನು ಮಾಡಿದ್ದಾರೆ” ಎಂದು ಮಾಯಾವತಿ ಆರೋಪಿಸಿದ್ದಾರೆ.

“ಈ ಪಕ್ಷಗಳು ಶೀಘ್ರದಲ್ಲೇ ತಮ್ಮ ಸಂವಿಧಾನ ವಿರೋಧಿ ನಿಲುವನ್ನು ಬದಲಾಯಿಸದಿದ್ದರೆ, ದೇಶಾದ್ಯಂತ ಈ ಪಕ್ಷಗಳ ವಿರುದ್ಧ ನಾವು ಧ್ವನಿ ಎತ್ತಬೇಕಾಗುತ್ತದೆ” ಎಂದು ಎಚ್ಚರಿಕೆಯನ್ನೂ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X