ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

Date:

Advertisements

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌ ಅಂಬೇಡ್ಕರ್ ವಸತಿ ಶಾಲೆಯ 20 ವಿದ್ಯಾರ್ಥಿಗಳನ್ನು ಕೆರೆಯಿಂದ ನೀರು ತರಲು ಕಳುಹಿಸಲಾಗಿದೆ. ವಿದ್ಯಾರ್ಥಿಗಳನ್ನು ಕೆರೆಗೆ ಕಳುಹಿಸಿದ್ದ ಪ್ರಾಂಶುಪಾಲರು, ಕಚೇರಿ ಸಹಾಯಕ, ಸೆಕ್ಯುರಿಟಿ ಹಾಗೂ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರ ಶಶಿಧರ್ ಮೌರ್ಯ ಆಗ್ರಹಿಸಿದ್ದಾರೆ.

“ಭಾರೀ ಮಳೆಯಿಂದಾಗಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈ ವೇಳೆ, ವಸತಿ ಶಾಲೆಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳನ್ನು ಶಾಲೆಯಿಂದ 0.5 ಕಿಮೀ ದೂರದಲ್ಲಿರುವ ಕೆರೆಗೆ ನೀರು ತರಲು ಕಳುಹಿಸಿದ್ದಾರೆ. ಕೆರೆ ಸಂಪೂರ್ಣ ತುಂಬಿದೆ. ಮಾತ್ರವಲ್ಲದೆ, “ನೀರು ತರಲು ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ವಾರ್ಡನ್, ವಿದ್ಯಾರ್ಥಿಗಳನ್ನು ದನಗಳನ್ನು ಓಡಿಸುವ ಹಾಗೆ, ಬೆತ್ತ ಹಿಡಿದು ಓಡಿಸುತ್ತಿದ್ದರು” ಎಂದು ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಮಳೆಯಿಂದಾಗಿ ಕೆರೆಯ ದಡ ಕೂಡ ಪಸಿಯಾಗಿದೆ. ಮಕ್ಕಳು ಕೆರೆ ಬಳಿ ಹೋದಾಗ, ಕಾಲು ಜಾರಿ ಬಿದ್ದು, ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗುವ ಸಂಭವವನ್ನೂ ಯೋಚಿಸದೆ, ವಿದ್ಯಾರ್ಥಿಗಳನ್ನು ನೀರು ತರಳು ಕಳುಹಿಸಿದ್ದ ಪ್ರಾಂಶುಪಾಲರು, ವಾರ್ಡನ್, ಸೆಕ್ಯುರಿಟಿ, ಶಾಲಾ ಅಟೆಂಡರ್‌ಅನ್ನು ಸೇವೆಯಿಂದ ಅಮಾನತು ಮಾಡಬೇಕು. ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X