ಧಾರವಾಡ | ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ದುರಸ್ತಿಗೆ ಕ್ರಮ; ಜಿಲ್ಲಾಡಳಿತಕ್ಕೆ ಸಚಿವ ಸಂತೋಷ್ ಲಾಡ್ ಸೂಚನೆ

Date:

Advertisements

ಧಾರವಾಡದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಕಟ್ಟಡವು 130 ವರ್ಷಗಳಷ್ಟು ಹಳೆಯದ್ದಾಗಿದ್ದು, ಐತಿಹಾಸಿಕ ಪರಂಪರೆ ಹೊಂದಿದೆ. ಆ ಕಟ್ಟಡವನ್ನು ದುರಸ್ತಿ ಮಾಡಿ, ಪುನರುಜ್ಜೀವನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ನೀಡಿದ್ದಾರೆ.

ಬುಧವಾರ ಧಾರವಾಡಕ್ಕೆ ತೆರಳಿದ್ದ ಅವರು, ಮಹಿಳಾ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ, ಕಾಲೇಜಿನ ಕಟ್ಟಡ ಸೋರುತ್ತಿರುವುದು ಮತ್ತು ಮೂಲಸೌಕರ್ಯಗಳ ಕೊರತೆ ಇರುವುದನ್ನು ಅವರು ಗಮನಿಸಿದರು.

“ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣದ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ, ಅನುದಾನ ನೀಡಲಾಗುವುದು. ಕಾಲೇಜಿನ ಹಳೆಯ ಕಟ್ಟಡುವ ಐತಿಹಾಸಿಕ ಕಟ್ಟಡವಾಗಿದ್ದು, ಅದರ ವಿನ್ಯಾಸ ಉಳಿಸಿಕೊಂಡು ದುರಸ್ತಿ ಮಾಡಿಸಬೇಕು. ಕಟ್ಟಡ ಹೊರತಾದ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಸೂಕ್ತ ನೀಲನಕ್ಷೆ ರಚಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

Advertisements

“ಅತಿಯಾದ ಮಳೆಯಿಂದಾಗಿ ಮತ್ತು ಕಟ್ಟಡ ಹಳೆಯದಾಗಿರುವುದರಿಂದ ಸೋರಿಕೆಯಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವುದರಿಂದ ಈ ಕಟ್ಟಡದಲ್ಲಿ ತರಗತಿಗಳನ್ನು ನಡೆಸಬಾರದು” ಎಂದು ಉಪನ್ಯಾಸಕರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿನಿರ್ದೇಶಕ ಪ್ರೋ. ಪಿ.ಬಿ. ಕಲ್ಯಾಣಶೆಟ್ಟರ, ಪ್ರಾಚಾರ್ಯ ಡಾ.ಸರಸ್ವತಿ ಕಳಸದ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಮಹಾನಗರ ಪಾಲಿಕೆಯ ಸದಸ್ಯ ಡಾ.ಮಯೂರ ಮೊರೆ, ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಸೇರಿದಂತೆ ಕಾಲೇಜು ಅಧ್ಯಾಪಕರು, ಇತರ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X