ದೆಹಲಿ-ಮಣಿಪುರ ಸಮಸ್ಯೆ | ಎನ್‌ಡಿಎಗೆ ಬೆಂಬಲ ಸೂಚಿಸಿದ ವೈಎಸ್ಆರ್ ಕಾಂಗ್ರೆಸ್

Date:

Advertisements

ದೆಹಲಿಯಲ್ಲಿ ಸೇವೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ವಿವಾದಾತ್ಮಕ ಮಸೂದೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರು ಬೆಂಬಲ ಸೂಚಿಸಿದ್ದಾರೆ.

ಈ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಂತೆ ತಡೆಯಲು ವಿಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರ ಮಸೂದೆ ಮಂಡಿಸಲು ಇದ್ದ ಅಡೆತಡೆಗಳನ್ನು ನಿವಾರಿಸಲು ಸಿದ್ಧವಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬೆಂಬಲ ನೀಡಿದ್ದಕ್ಕೆ ಎನ್‌ಡಿಎ ಮೈತ್ರಿಕೂಟ ಧನ್ಯವಾದ ತಿಳಿಸಿದೆ.

Advertisements

ಈ ಬಗ್ಗೆ ಹೇಳಿಕೆ ನೀಡಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವಿ ವಿಜಯಸಾಯಿ ರೆಡ್ಡಿ, “ನಾವು ಎರಡೂ ವಿಷಯಗಳಲ್ಲಿ ಅಂದರೆ ದೆಹಲಿ ಸಮಸ್ಯೆ ಮಾತ್ರವಲ್ಲದೆ ಮಣಿಪುರ ವಿಷಯದಲ್ಲೂ ಕೇಂದ್ರ ಸರ್ಕಾರದ ಪರವಾಗಿ ಮತ ಚಲಾಯಿಸುತ್ತೇವೆ” ಎಂದು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ರಾಜ್ಯಸಭೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಒಂಬತ್ತು ಸದಸ್ಯರಿದ್ದು, ಅವರ ಬೆಂಬಲವು ಮಸೂದೆ ಅಂಗೀಕಾರಕ್ಕೆ ನಿರ್ಣಾಯಕವಾಗಿತ್ತು.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಬೆಂಬಲವನ್ನು ನೀಡುತ್ತಿದ್ದಂತೆ, ವಿವಾದಾತ್ಮಕ ದೆಹಲಿ ನಿಯಂತ್ರಣ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸುವುದು ಹೆಚ್ಚು ಖಚಿತವಾಗಿದೆ.

123 ಮತಗಳನ್ನು ಒಳಗೊಂಡಿರುವ ಎನ್‌ಡಿಎ, ವಿರೋಧ ಪಕ್ಷದ ಮೈತ್ರಿಕೂಟದ ನಿರೀಕ್ಷಿತ 108 ಮತಗಳ ವಿರುದ್ಧ ಬಹುಮತವನ್ನು ಹೊಂದಿದೆ.

ಒಂಬತ್ತು ಸಂಸದರನ್ನು ಹೊಂದಿರುವ ಬಿಜು ಜನತಾ ದಳವು ಈ ವಿಷಯದಲ್ಲಿ ತನ್ನ ನಿಲುವನ್ನು ಇನ್ನೂ ಅಂತಿಮಗೊಳಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X