ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಇಂದು ದಿನಾಂಕ 29-ಜೂನ್ -2025 ರಂದು ಬೆಳಗ್ಗೆ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು ಓಟ)ವನ್ನು ಹಮ್ಮಿಕೊಳ್ಳಲಾಗಿತ್ತು.

ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು Walk and Run ಗೆ ಚಾಲನೆ ನೀಡಿದರು.

DAR ಕವಾಯತು ಮೈದಾನದಿಂದ ಪ್ರಾರಂಭಿಸಿ ಅಶೋಕ ವೃತ್ತ, ಎ ಎ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ, ಐ ಬಿ ವೃತ್ತದ ಮುಖಾಂತರ ಪುನಃ ಶಿವಮೊಗ್ಗ DAR ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.Walk and Run (ನಡಿಗೆ ಮತ್ತು ಓಟ)ದಲ್ಲಿ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು CEN ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.