ಮೈಸೂರು | ಹುಲಿಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ : ವಿನಯ್ ಕುಮಾರ್

Date:

Advertisements

ಮೈಸೂರು ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಹುಲಿಗಳು ಸಾವನಪ್ಪಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷಣ ವಿಧಿಸಬೇಕು, ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ವಿರುದ್ಧವು ಶಿಸ್ತು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಒತ್ತಾಯಿಸಿದರು.

ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ. ಅಂತಹದರಲ್ಲಿ, ತಾಯಿ ಹುಲಿ ಹಾಗೂ 4 ಮರಿಗಳು ಸಾವಿಗೀಡಾಗಿರುವುದು ಆಘಾತಕಾರಿ ವಿಷಯ. ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ ಅವಕಾಶ ಮಾಡಿಕೊಟ್ಟಿರುವುದು ಇಂತಹ ಅನಾಹುತಗಳಿಗೆ ಕಾರಣವಾಗಿದೆ. ಹಾಗೂ ಅರಣ್ಯ ಪ್ರದೇಶಗಳಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅವಘಡಗಳು ಹೆಚ್ಚಾಗುತ್ತದೆ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ರೈತರ 448 ಎಕರೆ ಭೂಮಿ ಕಬಳಿಸಲು ಮುಂದಾದ ಕೆಐಎಡಿಬಿ

Advertisements

ಪ್ರತಿಭಟನೆಯಲ್ಲಿ ವನ್ಯಜೀವಿ ಛಾಯಾಗ್ರಾಹಕ ಉಮೇಶ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ನಂಜುಂಡಿ, ರವಿಚಂದ್ರ, ನೀತು, ಮಂಜುನಾಥ್, ರವಿ, ಯತೀಶ್ ಬಾಬು, ಈಶ್ವರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X