ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

Date:

Advertisements

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ ತೆರಳಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ ಅವರು, “ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಡಬಾರದೆಂದು ಸರ್ಕಾರಿ ಆದೇಶ ಇದೆ. ಆದರೂ, ಮುಂಡರಗಿ ತಾಲೂಕಿನ ಬಿದರಳ್ಳಿ, ಹಾರೊಗೇರಿ, ಹಮ್ಮಿಗಿ, ಡಂಬಳ ಗ್ರಾಮ ಪಂಚಾಯಿತಿಗಳಲ್ಲಿ ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ಕೊಡುತ್ತಿರುವುದು ಕಂಡುಬಂದಿದೆ” ಎಂದು ಆರೋಪಿಸಿದ್ದಾರೆ.

“ಜಾತಿ ಕಾಲಮ್‌ಅನ್ನು ತಾಲೂಕು ದಂಡಾಧಿಕಾರಿಗಳು ಪರಿಶೀಲಿಸಿ ಜಾತಿ ಪ್ರಮಾಣಪತ್ರ ನೀಡಬೇಕು. ಮಡ್ಡಿ ಜನಾಂಗಕ್ಕೆ ಸೇರಿದವರಿಗೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದು” ಎಂದು ಆಗ್ರಹಿಸಿದರು.

Advertisements

ಡಿಎಸ್ಎಸ್ ಮುಖಂಡ ದುರುಗಪ್ಪ ಹರಿಜನ ಮಾತನಾಡಿ, “ಮಡ್ಡಿ ಜನಾಂಗದ ಕೆಲವರು ಸರ್ಕಾರಿ ಸೌಲಭ್ಯಗಳಿಗಾಗಿ ಭೋವಿ ಜನಾಂಗಕ್ಕೆ ಸೇರಿದವರೆಂದು ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಹೀಗಾಗಿ, ತಾಲೂಕು ದಂಡಾಧಿಕಾರಿಗಳು ಕೊಟ್ಟಿ ಜಾತಿ ಪ್ರಮಾಣ ಪತ್ರವನ್ನು ಕೊಡಬಾರದು. ಒಂದುವೇಳೆ, ಮುಂದಿನ ದಿನಗಳಲ್ಲಿ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಟ್ಟಲ್ಲಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಡಿಎಸ್ಎಸ್ ಮುಖಂಡ ಕೊಟ್ರೇಶಿ, ಬಿ.ಎಸ್ ಪುಜಾರ್, ಫಕೀರೇಶ ಮಾದರ ಹಾಗೂ ವಿ ಟಿ ತಿಮ್ಮಾಪುರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X