ಹಾವೇರಿ | ಪತ್ರಿಕಾ ವಿತರಕರ ಸಮ್ಮೇಳನ ಆಯೋಜನೆ

Date:

Advertisements

“ಪತ್ರಿಕಾ ವಿತರಕರು ಮಳೆ, ಗಾಳಿ, ಚಳಿ ಎನ್ನದೇ ನಿತ್ಯವೂ ಪತ್ರಿಕೆಗಳನ್ನು ಮನೆಗೆ ತಲುಪಿಸುತ್ತಿದ್ದಾರೆ. ವಿತರಕರ ಹಿತ ಕಾಯಲು 2019ರಲ್ಲಿ ಒಕ್ಕೂಟ ಸ್ಥಾಪಿಸಲಾಗಿದೆ. ವಿತರಕರ ಅಸ್ತಿತ್ವವನ್ನು ಉಳಿಸಿಕೊಂಡು ನಮ್ಮ ಕೂಗನ್ನು ಸರ್ಕಾರಕ್ಕೆ ತಲುಪಿಸಲು ಪತ್ರಿಕಾ ವಿತರಕರ ಸಮ್ಮೇಳನ ಆಯೋಜಿಸಲಾಗುತ್ತಿದೆ” ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗಪ್ಪ ಹೇಳಿದರು.

ಹಾವೇರಿ ಪಟ್ಟಣದ ಪತ್ರಿಕಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಕಾರ್ಯಕಾರಿಣಿ ಸಮಿತಿ ಸಭೆ’ಯಲ್ಲಿ ಅವರು ಮಾತನಾಡಿದರು.

“ಮೈಸೂರಿನಲ್ಲಿ ಆಗಸ್ಟ್ 27 ಹಾಗೂ 28ರಂದು ರಾಜ್ಯಮಟ್ಟದ 5ನೇ ವಿತರಕರ ಸಮ್ಮೇಳನ ಹಾಗೂ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನವನ್ನು ಯಶಸ್ವಿಗೊಳಿಸಲು ಪದಾಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಹೇಳುದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ನಾಡಿನ ಅಭಿವೃದ್ಧಿಗೆ ಕೆಂಪೇಗೌಡರ ಪಾತ್ರ ಅಪಾರ: ಕೆ. ಎಂ. ಮಾಕಣ್ಣವರ

“ಪತ್ರಿಕಾ ವಿತರಕರ ಹೆಸರಿನಲ್ಲಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ₹ 10 ಕೋಟಿ ಮೀಸಲಿಡಬೇಕು. ಪತ್ರಿಕಾ ವಿತರಕರಿಗೂ ಆಶ್ರಯ ಯೋಜನೆಯಡಿ ನಿವೇಶನ ಹಾಗೂ ಮನೆಗಳನ್ನು ಒದಗಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ವಿದ್ಯಾರ್ಥಿವೇತನ ರೂಪಿಸಬೇಕು. ವಿತರಕರು ಅಕಾಲಿಕ ಮರಣ ಹೊಂದಿದರೆ, ಅವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಬೇಕು. ವಿತರಕರಿಗೆ ಸಬ್ಸಿಡಿ ದರದಲ್ಲಿ ಎಲೆಕ್ಟ್ರಿಕ್ ಬೈಕ್ ಒದಗಿಸಬೇಕು. 60 ವರ್ಷ ವಯೋಮಿತಿ ಮೀರಿದ ವಿತರಕರಿಗೆ ಪ್ರತಿ ತಿಂಗಳು ₹ 2 ಸಾವಿರ ಪಿಂಚಣಿ ನೀಡಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಸಮ್ಮೇಳನದ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದು ಹೇಳಿದರು.

ವಿವಿಧ ಜಿಲ್ಲೆಗಳ ಪತ್ರಿಕಾ ವಿತರಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

Download Eedina App Android / iOS

X