US Open Badminton: ಕರ್ನಾಟಕದ ಆಯೂಷ್‌ ಶೆಟ್ಟಿ ಚಾಂಪಿಯನ್‌;ಮಹಿಳೆಯರ ವಿಭಾಗದಲ್ಲಿ ತನ್ವಿ ಶರ್ಮಾ ರನ್ನರ್‌ ಅಪ್‌

Date:

Advertisements

ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಕಾರ್ಕಳ ಮೂಲದ 20 ವರ್ಷದ ಆಯೂಷ್‌ ಶೆಟ್ಟಿ ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ. ಹಾಗೆಯೇ ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ.

6 ಅಡಿ 4 ಇಂಚು ಎತ್ತರ ಹೊಂದಿರುವ ಆಯುಷ್‌ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ ಮೂಲಕ ನೇರ ಸೆಟ್‌ಗಳಿಂದ ಪಂದ್ಯದಲ್ಲಿ ಜಯಶಾಲಿಯಾದರು.

Advertisements

ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌ ಪ್ರಶಸ್ತಿಗೆ ಭಾಜನರಾದರು. ತಾನ್ವಿ ಶರ್ಮಾ ಚೀನಾದ ಬೈವೆನ್‌ ಜೆಂಗ್‌ ಅವರನ್ನು 21-16, 21-16 ನೇರ ಸೆಟ್‌ಗಳಿಂದ ಪರಾಭವಗೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಈ ವರ್ಷದ ಆರಂಭದಲ್ಲಿ ಆಯೂಷ್‌ ಶೆಟ್ಟಿ ಓರ್ಲಿಯನ್ಸ್ ಮಾಸ್ಟರ್ಸ್ ಸೂಪರ್ 300 ರ ಸೆಮಿಫೈನಲ್ ತಲುಪಿದ್ದರು. ಮಾಜಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ ಮತ್ತು ರಾಸ್ಮಸ್ ಗೆಮ್ಕೆ ಅವರನ್ನು ಸೋಲಿಸಿದರು. ಮೇ ತಿಂಗಳಲ್ಲಿ ಅವರು ಹಿರಿಯ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಸೋಲಿಸಿ ತೈಪೆ ಓಪನ್‌ನ ಸೆಮಿಫೈನಲ್ ಪ್ರವೇಶಿಸಿದ್ದರು.

ಆಯುಷ್ ಶೆಟ್ಟಿ ತಮ್ಮ ಎಂಟನೇ ವಯಸ್ಸಿನಲ್ಲಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದರು. ತಂದೆ ಮನೆಯ ಅಂಗಳದಲ್ಲಿ ಆಡುವುದನ್ನು ನೋಡಿ ಬ್ಯಾಡ್ಮಿಂಟನ್‌ ಆಟದತ್ತ ಆಸಕ್ತಿ ಬೆಳೆಸಿದರು. ಆರಂಭದಲ್ಲಿ ಕಾರ್ಕಳ ಮತ್ತು ಮಂಗಳೂರಿನಲ್ಲಿ ತರಬೇತಿ ಪಡೆದಿದ್ದರು. ನಂತರ ಆಯುಷ್ ಶೆಟ್ಟಿ ಕುಟುಂಬ ಬೆಂಗಳೂರಿಗೆ ನೆಲೆಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X