ಚಿಕ್ಕಮಗಳೂರು l ನಕಲಿ UPI: ಮೆಡಿಕಲ್ ಮಾಲೀಕನಿಗೆ ವಂಚನೆ

Date:

Advertisements

ನಕಲಿ ಯುಪಿಐ ಪಾವತಿ ಮೂಲಕ ಮೆಡಿಕಲ್‌ ಮಾಲೀಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಶೃಂಗೇರಿ ಪಟ್ಟಣದ ಸಂತೆ ಮಾರುಕಟ್ಟೆ ಸಮೀಪದ ಮೆಡಿಕಲ್‌ ಅಂಗಡಿಯಲ್ಲಿ, ಇಬ್ಬರು ವ್ಯಕ್ತಿಗಳು ಶನಿವಾರ ರಾತ್ರಿ 3,600 ರೂಪಾಯಿ ಮೌಲ್ಯದ ಔಷಧಿ ಮತ್ತು ಇತರ ವಸ್ತುಗಳನ್ನು ಖರೀದಿಸಿ, ನಕಲಿ ಯುಪಿಐ ಆಪ್ ಮೂಲಕ ಸ್ಕ್ಯಾನ್ ಮಾಡಿ ಟ್ರಾನ್ಸಾಕ್ಷನ್ ಐಡಿ ತೋರಿಸಿ ಹಣ ಪಾವತಿಸಿದಂತೆ ನಂಬಿಸಿ ವಂಚನೆ ಮಾಡಲಾಗಿದೆ.

ಮೆಡಿಕಲ್ ಮಾಲೀಕ ಹಣ ಖಾತೆಗೆ ಜಮಾ ಆಗಿಲ್ಲವೆಂದು ಆ ವ್ಯಕ್ತಿಗಳನ್ನು ಕರೆದು ಕೇಳಿದಕ್ಕೆ ಅದೇ ನಕಲಿ ಪಾವತಿ ಐಡಿ ತೋರಿಸಿದ್ದಾರೆ.  ಹಣ ಖಾತೆಗೆ ಜಮಾ ಆಗಿರಬೇಕೆಂದು ತಿಳಿದಿದ್ದರು.  ಮೆಡಿಕಲ್‌ ಮಾಲೀಕ ಭಾನುವಾರ ಖಾತೆ ಪರಿಶೀಲನೆ ನಡೆಸಿದಾಗ ವಂಚಿಸಿರುವುದು ದೃಢಪಟ್ಟಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹಸಿರು ಫೌಂಡೇಶನ್ ನೇತೃತ್ವದಲ್ಲಿ  ವನಮಹೋತ್ಸವ ಕಾರ್ಯಕ್ರಮ

ಈ ಕುರಿತು ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ವ್ಯಾಪಾರಸ್ಥರು ಇಂತಹ ನಕಲಿ ಯುಪಿಐ ಪಾವತಿಗಳ ಬಗ್ಗೆ ಎಚ್ಚರ ವಹಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X