ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ

Date:

Advertisements

“ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಜೆಡಿಎಸ್ ಪಕ್ಷದ ಮುಖಂಡರು ಆರೋಪಿಸಿದರು.

ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ರಾಜ್ಯ ಸರಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಕಛೇರಿವರೆಗೆ ಮೆರವಣಿಗೆ ಹಮ್ಮಿಕೊಂಡು ತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

“ಕಾಂಗ್ರೆಸ್‌ನ ಹಿರಿಯ ನಾಯಕರೇ ದಾಖಲೆಗಳ ಸಮೇತ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ. ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳು ಕೊಟ್ಟು, ಸದ್ಯ ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಲು ಆಗುತ್ತಿಲ್ಲ. ಇನ್ನು ವಸತಿ ಇಲಾಖೆಯಲ್ಲಂತೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರಿ ಆಸ್ಪತ್ರೆ ವೈದ್ಯರ ವರ್ಗಾವಣೆ: ಕರವೇ ಗಜಸೇನೆ ಖಂಡನಿಯ

“ವಸತಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಹಾಗೂ ಸಚಿವ ಝಮೀರ್ ಅಹ್ಮದ್ ವಿರುದ್ಧ ಅವರ ಪಕ್ಷದ ಶಾಸಕರೇ ಆಪಾದನೆ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿರುವ ಝಮೀರ್ ಅಹ್ಮದ್‌ ಅವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X