ರಾಯಚೂರು | ಚಿಕಿತ್ಸೆಗೆ ದಾಖಲಾಗಿದ್ದ ಬಾಲಕ ಜಿಲ್ಲಾಸ್ಪತ್ರೆಯಿಂದ ನಾಪತ್ತೆ; ದೂರು ದಾಖಲು

Date:

Advertisements

ಕೈ ಬೆರಳು ಸುಟ್ಟ ಹಿನ್ನಲೆಯಲ್ಲಿ ರಾಯಚೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ 9 ವರ್ಷದ ಬಾಲಕ ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಾಪತ್ತೆಯಾದ ಬಾಲಕ ರಾಯಚೂರು ತಾಲ್ಲೂಕಿನ ಜುಲಮಗೇರಾ ತಾಂಡದ ನಾಗಲಕ್ಷ್ಮಿ ಅವರ ಪುತ್ರ 9 ವರ್ಷದ ವಿಷ್ಣುನಾಯಕ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಮೊಬೈಲ್‌ ಚಾರ್ಜಿಂಗ್‌ ಇಟ್ಟು ನೋಡುತ್ತಿದ್ದ ಸಮಯದಲ್ಲಿ ವಿದ್ಯುತ್‌ ಸ್ಪರ್ಶಗೊಂಡ ಕಾರಣ ಕೈ ಬೆರಳು ಸುಟ್ಟು ಗಾಯಗೊಂಡಿದ್ದರಿಂದ ಕಳೆದ ಜೂ.17 ರಂದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಜೂನ್ 21 ರಂದು ರಾತ್ರಿ ಆಸ್ಪತ್ರೆ ಮಂಚದ ಮೇಲೆ ಮಲಗಿದ್ದ ಬಾಲಕ 22 ರಂದು ಬೆಳಗಿನ ಜಾವದ ವೇಳೆಗೆ ನಾಪತ್ತೆಯಾಗಿದ್ದಾನೆ. ಇದರಿಂದ ಆತಂಕಗೊಂಡ ಬಾಲಕನ ತಾಯಿ ಸ್ಥಳೀಯ ಮಾರ್ಕೆಟ್‌ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ.

ದೂರು ದಾಖಲಿಸಿ ವಾರ ಕಳೆದರೂ ಬಾಲಕನ ಪತ್ತೆಯಾಗದೇ ಇರುವುದು ತಾಯಿಯನ್ನು ಇನ್ನಷ್ಟು ಆತಂಕಕ್ಕೆ ದೂಡಿದ್ದು, ತಾಯಿ ಮಗನ ಫೋಟೋ ಹಿಡಿದು ಹುಡುಕಾಟ ನಡೆಸಿದ್ದಾರೆ.

ಮಗನನ್ನ ದಾಖಲಿಸಿದ್ದ ರಿಮ್ಸ್ ಆಸ್ಪತ್ರೆಯ ವಾರ್ಡ್‌ಗೆ ಆಗಾಗ ಬಂದು ಮಗನನ್ನ ಹುಡುಕುತ್ತಲೇ ಇದ್ದಾರೆ. ಜಿಲ್ಲಾಸ್ಪತ್ರೆ ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯವೇ ಮಗ ಕಾಣೆಯಾಗಲು ಕಾರಣ ಎಂದು ತಾಯಿ ಆರೋಪಿಸಿದ್ದಾರೆ. ಆಸ್ಪತ್ರೆ ಸಿಸಿ ಕ್ಯಾಮೆರಾಗಳು ಹಾಳಾಗಿದ್ದು ಬಾಲಕನ ಚಲನವಲನ ಸೆರೆಯಾಗಿಲ್ಲ. ಪೊಲೀಸರು ಹುಡುಕಾಟ ಮುಂದುವರೆಸಿರುವುದಾಗಿ ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ 23 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ: ಜಿಲ್ಲಾಧಿಕಾರಿ ಆದೇಶ

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X