‘ಪ್ರಖಾಂಡ ಪಂಡಿತ’ ಪ್ರಕಾಶ್ ಬೆಳವಾಡಿಗೆ ನೆಲದ ಸಂವಿಧಾನ ತಿಳಿದಿದೆಯೇ? ಬಿ ಕೆ ಹರಿಪ್ರಸಾದ್‌ ಕಿಡಿ

Date:

Advertisements

ರಾಜ್ಯಸಭೆಯ ಸದಸ್ಯರಾದವರು ಪ್ರಧಾನಿಯಾಗಬಾರದೆಂದು ಯಾವ ಸಂವಿಧಾನ, ಕಾನೂನಿನಲ್ಲಿದೆ ಎಂದು ನಟ ಪ್ರಕಾಶ್ ಬೆಳವಾಡಿ ಜನರಿಗೆ ತಿಳಿಸಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದೇ ಕಾನೂನುಬಾಹಿರ ಎಂದು ಹೇಳಿಕೆ ನೀಡಿರುವ ಪ್ರಕಾಶ್ ಬೆಳವಾಡಿ ವಿರುದ್ಧ ಎಕ್ಸ್‌ ತಾಣದಲ್ಲಿ ಹರಿಹಾಯ್ದಿರುವ ಅವರು, “ಜಗತ್ತು ಕಂಡ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರಾಗಿ ಪ್ರಧಾನಿಯಾದದ್ದು ಯಾವ ಅಪರಾಧ? ಅಸ್ಸಾಂ ದೇಶದಲ್ಲಿರುವ ರಾಜ್ಯವಲ್ಲವೇ? ಕರ್ನಾಟಕದಿಂದಲೇ ಪ್ರಧಾನಿಯಾದ ಹೆಚ್ ಡಿ ದೇವೇಗೌಡರು ಕೂಡ ರಾಜ್ಯಸಭೆಯ ಸದಸ್ಯರಾಗಿಯೇ ಎನ್ನುವುದು ಬಹಿರಂಗ ಸತ್ಯ” ಎಂದಿದ್ದಾರೆ.

“ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ದೇಶದ ಪ್ರಜೆಯಾದವರು ಯಾವ ರಾಜ್ಯದಿಂದಲೂ ರಾಜ್ಯಸಭೆ ಸದಸ್ಯರಾಗಲು ಅರ್ಹರು ಎಂದು ದಾವೆ ಹೂಡಿದ ನಂತರ ಸುಪ್ರೀಂಕೋರ್ಟ್ ಕೂಡ ಅದಕ್ಕೆ ಅವಕಾಶ ನೀಡಿದೆ. ಇದು ‘ಪ್ರಖಾಂಡ ಪಂಡಿತ’ ಬೆಳವಾಡಿಗೆ ತಿಳಿದಿದೆಯೇ? ಸಂವಿಧಾನ, ಕಾನೂನಿನ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ” ಎಂದು ಹೇಳಿದ್ದಾರೆ.

Advertisements

“7 ವರ್ಷದ ಬಾಲಕಿ ಮೇಲೆ ಶಾಸಕನ ತಮ್ಮನಿಂದ ಅತ್ಯಾಚಾರ ಆದರೂ, ಆತನ ಪರವಾಗಿ ವಾದ ಮಾಡುತ್ತಾ, ಕೋರ್ಟ್​​ನಲ್ಲಿ ಕಣ್ಣೀರು, ಕರುಣೆಗಿಂತಲೂ ಮುಖ್ಯವಾಗಿ ಬೇಕಿರುವುದು ಸಾಕ್ಷಿಗಳು ಎಂದು ‘ಯುದ್ಧಕಾಂಡ’ ಸಿನಿಮಾದಲ್ಲಿ ಡೈಲಾಗ್ ಹೊಡೆಯುವ ಪ್ರಕಾಶ್ ಬೆಳವಾಡಿಯವರಿಗೆ ನಿಜ ಜೀವನದಲ್ಲಿ ಮಾತಾಡುವಾಗ ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಢಿ ಮಾಡಿಕೊಂಡಂತಿದೆ” ಎಂದು ಕುಟುಕಿದ್ದಾರೆ.

“ಮೋದಿಯ ಚಮಚಾಗಿರಿ ಮಾಡುತ್ತೇನೆ ಎಂದು ಬಹಿರಂಗವಾಗಿಯೇ ಘೋಷಿಸಿಕೊಂಡಿರುವ ಬೆಳವಾಡಿ, ಕನಿಷ್ಠಪಕ್ಷ ಮೋದಿ ಗುಜರಾತಿನಲ್ಲಿ ಶಾಸಕರಾಗಿ ಮುಖ್ಯಮಂತ್ರಿಯಾದರೋ, ಇಲ್ಲ ಮುಖ್ಯಮಂತ್ರಿಯಾದ ನಂತರ ಶಾಸಕರಾದರೋ ಎಂಬ ಸಾಮಾನ್ಯ ತಿಳಿವಳಿಕೆಯೂ ಇಲ್ಲದೇ ಇರುವುದು ದುರಂತ” ಎಂದು ಟೀಕಿಸಿದ್ದಾರೆ.

“ಸಂವಿಧಾನದಲ್ಲಿ ಪ್ರಧಾನಿಗಳ ಆಯ್ಕೆ, ಅಧಿಕಾರ, ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ವಿಧಿಗಳಿವೆ ಅದರ ಬಗ್ಗೆ ಎಳ್ಳಷ್ಟು ಬೆಳವಾಡಿಗೆ ತಿಳಿವಳಿಕೆ ಇಲ್ಲ, ಜ್ಞಾನವಂತೂ ಇಲ್ಲವೇ ಇಲ್ಲ. ಭಾರತದ ಪ್ರಜೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದರೆ ದೇಶದ ಪ್ರಧಾನಿಯಾಗಲು ಅರ್ಹತೆ ಹೊಂದಿರುತ್ತಾರೆ. ಆದರೆ ನಿಮ್ಮಂತೆ ದಿವಾಳಿಯಂತೂ ಆಗಿರಬಾರದು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಸಂವಿಧಾನದ ಪ್ರಖಾಂಡ ಪಂಡಿತರಂತೆ, ಕಾನೂನು ತಜ್ಞರಂತೆ ಸಂವಿಧಾನದ ವಿಧಿ, ವಿಧಾನಗಳು ಹಾಗೂ ಕಾನೂನುಗಳ ಬಗ್ಗೆ ವಾಚಾಮಗೋಚರ ಹಲುಬಿರುವ ಬೆಳವಾಡಿಗೆ ದೇಶದ ಮೂಲೆಯ ಯಾವ ಪ್ರಜೆಯಾದರೂ ಪ್ರಧಾನಿಯಾಗುವ ಹಕ್ಕು, ಅಧಿಕಾರ, ಅರ್ಹತೆ ಸಂವಿಧಾನವೇ ನೀಡಿದೆ ಎಂಬುದು ಗೊತ್ತಿಲ್ಲದೆ ಇರುವುದು ವಿಪರ್ಯಾಸ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಚೆನ್ನಾಗಿ ಉಗಿದಿದ್ದೀರಿ ಬಿ ಕೆ ಹರಿಪ್ರಸಾದ್ ಸರ್ ಆ ಬೇವರ್ಸಿ ಬೆಳವಾಡಿಗೆ, ತಲೆ ತುಂಬಾ ಜಾತಿ ಪ್ರಜ್ಞೆಯನ್ನೇ ತುಂಬಿಕೊಂಡಿರುವ ಕೆಟ್ಟ ಹುಳು ಇ ಪ್ರಖಂಡ ಪಂಡಿತ ಬೆಳವಾಡಿ. ಇವನಿಗೆ ಸಾಹಿತ್ಯ ಸಿನಿಮಾ ಬೇರೆ ಕೇಡು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X