ರಾಯಚೂರು | ಕಾರ್ಮಿಕರನ್ನು ವಜಾಗೊಳಿಸಿದ ಗುತ್ತಿಗೆದಾರ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ ನಡೆಸಿದೆ.

ಗುತ್ತಿಗೆದಾರರ ನಡೆಯನ್ನು ಖಂಡಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಂಘಟನೆಗಳ ಕಾರ್ಯಕರ್ತರು ಮತ್ತು ಕೆಲಸದಿಂದ ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದ್ದಾರೆ. “ನಗರಸಭೆ ವ್ಯಾಪ್ತಿಯಲ್ಲಿರುವ ವಿದ್ಯುತ್ ಕಂಬಗಳ ಸಂಖ್ಯೆಗೆ ಅನುಗುಣವಾಗಿ ಕಾರ್ಮಿಕರ ಸಂಖ್ಯೆಯನ್ನು ಹೆಚ್ಚಿಸಬೇಕು. ಜುಲೈ12 ರಿಂದ ನಗರಸಭೆ ಎಲೆಕ್ಟ್ರಿಕಲ್ ವಿಭಾಗದ ಕೆಲಸವನ್ನು ದುರುದ್ದೇಶದಿಂದ ಸ್ಥಗಿತಗೊಳಿಸಲಾಗಿದೆ. ನೌಕರರನ್ನು ಕೆಲಸದಿಂದ ವಜಾಗೊಳಿಸಿದ ಹೆಚ್‌ಕೆಎಲ್ ಎಲೆಕ್ಟಿಕಲ್ಸ್ ಗುತ್ತಿಗೆದಾರ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲೆಕ್ಟಿಕಲ್ ವಿಭಾಗದ ಕಾರ್ಮಿಕರಿಗೆ ಏಪ್ರಿಲ್‌ ತಿಂಗಳಿನಿಂದ ಜಾರಿಗೆ ಬರುವಂತೆ ಕನಿಷ್ಠ ವೇತನ ನಿಗದಿ ಮಾಡಬೇಕು. ಮೇ, ಜೂನ್ ತಿಂಗಳಿನ ವೇತನ ಪಾವತಿ ಬಾಕಿ ಉಳಿದಿದ್ದು, ಕೂಡಲೇ ಪಾವತಿಸಬೇಕು. ಕಾರ್ಮಿಕರಿಗೆ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ಕಾರ್ಮಿಕರಿಗೆ ಸಮವಸ್ತ್ರ, ಲೆದರ್ ಕೋಟ್, ಲೆದರ್ ಗ್ಲೋಸ್, ಬೂಟ್ ಮತ್ತು ಸುರಕ್ಷಿತ ಸಲಕರಣೆಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡ ಎಸ್ ಮಾರೆಪ್ಪ, ಕಾರ್ಯಾಧ್ಯಕ್ಷ ಬಿ.ಎ ಕೇಶವಮೂರ್ತಿ ಸೇರಿದಂತೆ ಹಲವು ಕಾರ್ಮಿಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X