ಎಸ್ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು ಮನದಟ್ಟು ಮಾಡಲಾಯಿತು. ಈ ಹಿಂದೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಮೂಲಕ ಲಭ್ಯವಿದ್ದ ಈ ವೇತನವನ್ನು ಇದೀಗ ರದ್ದುಪಡಿಸಲಾಗಿದ್ದು, ಪ್ರಸ್ತುತ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP) ಕೇವಲ 8ನೇ ತರಗತಿವರೆಗೆ ಮಾತ್ರ ಸಹಾಯಧನ ನೀಡುತ್ತಿದೆ. ಇದರ ಪರಿಣಾಮವಾಗಿ ಅನೇಕ ವಿದ್ಯಾರ್ಥಿಗಳು ಶಾಲೆ ಬಿಡುವಂತಹ ದುರಂತಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಆದರಿಂದ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್( SSP ) ನ್ನು 9 ನೇ ಮತ್ತು 10 ನೇ ತರಗತಿಯವರೆಗೆ ವಿಸ್ತರಿಸುವಂತೆ ಹಾಗೂ ಈ ಸಮಸ್ಯೆಯನ್ನು ತಕ್ಷಣದ ಮಟ್ಟಿಗೆ ಗಮನಿಸಿ ಮುಖ್ಯಮಂತ್ರಿಗಳ ಕಚೇರಿಗೆ ಮನವಿಯನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಎಸ್ ಐ ಓ ಉಡುಪಿಯ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ , ಸಫಾನ್ , ಅದ್ನಾನ್ , ನಿಹಾಲ್ , ನಿಫಾಲ್ ಮತ್ತು ಸದಸ್ಯರಾದ ಅಯಾನ್ ಮಲ್ಪೆ ,ಅಸೀಮ್ , ರಿಯಾನ್ ನಕ್ವಾ ಉಪಸ್ಥಿತರಿದ್ದರು.