ತುಮಕೂರು | ಸರ್ಕಾರಿ ಭೂಮಿ ಪರಿವರ್ತನೆ ಆರೋಪ: ಡಿಸಿ ಶುಭ ಕಲ್ಯಾಣ್ ವಿರುದ್ಧ ದೂರು

Date:

Advertisements

ನಕಲಿ‌ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಪರಭಾರೆ ಹಾಗೂ ಭೂ ಪರಿವರ್ತನೆ ಆರೋಪ ಪ್ರಕಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿರುದ್ದ ತುಮಕೂರು‌ ನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಮಾಹಿತಿ ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ದೂರು‌ ನೀಡಿದ್ದಾರೆ.

ಮಧುಗಿರಿ ತಾಲೂಕಿನ ತುಮ್ಮಲು ಗ್ರಾಮದ ಸರ್ವೆ ನಂ. 22ರಲ್ಲಿ 20 ಎಕರೆ 31 ಗುಂಟೆ ಸರ್ಕಾರಿ ದರಕಾಸ್ತು ಭೂಮಿ ಪರಭಾರೆ ಹಾಗೂ ಸರ್ವೆ ನಂ. 40 ರಲ್ಲಿ 7 ಎಕರೆ 4 ಗುಂಟೆ ಸರ್ಕಾರಿ ಭೂಮಿ ಪರಿವರ್ತನೆ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

“ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಸರ್ಕಾರಿ ದರಕಾಸ್ತು ಭೂಮಿಯನ್ನ ಏಷಿಯನ್ ಪ್ಯಾಬ್ ಟೆಕ್ ಲಿ. ಸೋಲಾರ್ ಪವರ್ ಪ್ಲಾಂಟ್ ಸ್ಥಾಪನೆಗೆ ಭೂ ಪರಿವರ್ತನೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಭಾನುಪ್ರಕಾಶ್, ಮಧುಗಿರಿ ತಹಶೀಲ್ದಾರ್ ಸಿರಿನ್ ತಾಜ್, ಕಂದಾಯ ಅಧಿಕಾರಿ ಚಿಕ್ಕರಾಜು ಅಕ್ರಮದಲ್ಲಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

“ಅಂದಿನ ಉಪವಿಭಾಗಾಧಿಕಾರಿ ಎಸ್ ಎಲ್ ಮಂಜುನಾಥ್ ಆದೇಶದಂತೆ ಮಧುಗಿರಿ ತಾಲೂಕಿನ ತೊಂಡೋಟಿ ಗ್ರಾಮದ ಟಿ ಎಸ್ ವಿಶ್ವೇಶ್ವರ ಶಾಸ್ತ್ರಿ ಹೆಸರಿಗೆ 10 ಎಕರೆ 31 ಗುಂಟೆ‌, ಭಾನು ಪ್ರಕಾಶ್-ಸತ್ಯಪ್ರಕಾಶ್ ಹೆಸರಿಗೆ ಜಂಟಿ ಯಾಗಿ 10 ಎಕರೆ 31 ಗುಂಟೆ, ಸರ್ವೆ ನಂ 40 ರಲ್ಲಿ ಟಿ ಎಸ್ ವೆಂಕಟನಾರಾಯಣ ಶಾಸ್ತ್ರಿ-ಶ್ರೀನಿವಾಸ್ ಶಾಸ್ತ್ರಿಗೆ ಜಂಟಿ 7 ಎಕರೆ 4 ಗುಂಟೆ ಸರ್ಕಾರಿ ಆಸ್ತಿ ಖಾತೆ ಮಾಡಲಾಗಿದೆ. ಇದೇ 7 ಎಕರೆ ಭೂಮಿಯನ್ನ ಶಿವಾಜಿನಗರದ ಮಹಮದ್ ಇಕ್ಬಾಲ್, ಮಹಮದ್ ಇಕ್ಬಾಲ್‌ನಿಂದ ದೇವನಹಳ್ಳಿ ತಾಲೂಕು ಚಮ್ಮೆನಹಳ್ಳಿ ಗ್ರಾಮದ ಗೋಪಾಲಗೌಡ ಎನ್ನುವವರಿಗೆ ಕ್ರಯ ಮಾಡಲಾಗಿದೆ. ಗೋಪಾಲಗೌಡನಿಂದ ಏಷಿಯನ್ ಪ್ಯಾಬ್ ಟೆಕ್ ಲಿ.ಗೆ, ಕಾಂಗ್ರೆಸ್ ಶಾಸಕ ಪುಟ್ಟಸ್ವಾಮಿಗೌಡ ಮಗ ಕೆ ಪವನ್ ಒಡೆತನದ ಸೋಲಾರ್ ಕಂಪನಿಗೆ, ಕುಣಿಗಲ್ ಸಬ್ ರಿಜಿಸ್ಟ್ರಾರ್ ಕಚೇರಿಯ ಕೆ ಪಿ ಪವನ್ ಹೆಸರಿಗೆ ನೊಂದಣಿ ಮಾಡಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ತುಮಕೂರು | ರಿಂಗ್‌ ರೋಡ್‌ ನೀಡುತ್ತಿದೆ ಸಾವಿನ ಆಹ್ವಾನ! : ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ‌ ರಮೇಶ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X