ಉತ್ತರಾಖಂಡದಲ್ಲಿ ಭಾರೀ ಮಳೆ; ರುದ್ರಪ್ರಯಾಗ, ಕೇದಾರನಾಥದಲ್ಲಿ ಆತಂಕ

Date:

Advertisements

ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು ಶಿವನ ಬೃಹತ್ ಪ್ರತಿಮೆ ನೀರಿನಲ್ಲಿ ಮುಳಿಗಿವೆ.

ಇದೇ ಸಂದರ್ಭದಲ್ಲಿ, ಉತ್ತರಾಖಂಡದ ಪ್ರಸಿದ್ಧ ತಾಣ ಕೇದಾರನಾಥದಲ್ಲಿ ‘ಕೇದಾರನಾಥ ಯಾತ್ರೆ’ಯೂ ನಡೆಯುತ್ತಿದೆ. ಸುಮಾರು 8 ಸಾವಿರ ಭಕ್ತರು ಕೇದಾರನಾಥದಲ್ಲಿದ್ದಾರೆ. ಅಲ್ಲಿಯೂ ಮಳೆ ಸುರಿಯುತ್ತಿದ್ದು, ಭಕ್ತರು ಆತಂಕಗೊಂಡಿದ್ದಾರೆ. ಕೇದಾರನಾಥದಲ್ಲಿದ್ದ ಎಲ್ಲ ಭಕ್ತರನ್ನು ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಸೋನ್‌ಪ್ರಯಾಗಕ್ಕೆ ಸ್ಥಳಾಂತರಿಸಿದ್ದಾರೆ.

ಮಳೆಯಿಂದಾಗಿ, ಚಾರ್‌ಧಾಮ ಯಾತ್ರೆಯನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಯಾತ್ರಾರ್ಥಿಗಳನ್ನು ವಾಹನಗಳಲ್ಲಿ ಕೇದಾರನಾಥಕ್ಕೆ ಕರೆದೊಯ್ಯಲಾಗಿದೆ.

Advertisements

ಕೇದಾರನಾಥದ ಗೌರಿಕುಂಡ್ ಹೆದ್ದಾರಿಯಲ್ಲಿ ಶಟಲ್ ಪಾರ್ಕಿಂಗ್ ಮತ್ತು ಮುಂಕಟಿಯಾ ಬಳಿ ಭೂಕುಸಿತಗಳೂ ಸಂಭವಿಸಿವೆ. ನಿರಂತರ ಮಳೆ ಸುರಿಯುತ್ತಿರುವ ಕಾರಣ ಹೆದ್ದಾರಿ ಮತ್ತು ಪಾದಚಾರಿ ಮಾರ್ಗವು ಹಲವೆಡೆ ಆತಂಕಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು – ಡೆಹ್ರಾಡೂನ್, ಉತ್ತರಕಾಶಿ, ತೆಹ್ರಿ, ಪೌರಿ, ರುದ್ರಪ್ರಯಾಗ, ನೈನಿತಾಲ್ ಹಾಗೂ ಬಾಗೇಶ್ವರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಜುಲೈ 6ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶದಲ್ಲಿಯೂ ಮಳೆಯಾಗುತ್ತಿದೆ. ಕುಲ್ಲು, ಮನಾಲಿ ಹಾಗೂ ಬಂಜಾರ್‌ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಪ್ರದೇಶಗಳ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಶಾಲೆಗಳು, ಐಟಿಐಗಳು, ವೃತ್ತಿಪರ ತರಬೇತಿ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X