ಉಡುಪಿ | ಜನರ ಹಕ್ಕನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ: ಎಚ್ ವಿ ವಾಸು

Date:

Advertisements

ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ ದೇಶ ದಿವಾಳಿ ಆಗುತ್ತದೆ ಎಂಬುದು ಕೂಡ ಸುಳ್ಳು. ಇಂತಹ‌ ಸುಳ್ಳುಗಳನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ, ಈದಿನ.ಕಾಮ್‌ ಮುಖ್ಯಸ್ಥ ಡಾ. ಎಚ್‌.ವಿ ವಾಸು ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ‘ಜನರ ಹಕ್ಕುನ್ನು ಖಚಿತಪಡಿಸುವ ಉಚಿತ ಯೋಜನೆಗಳು ಬಿಟ್ಟಿಯಲ್ಲ’ ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಅದರ ಬೆನ್ನಲ್ಲೇ ವಿರೋಧ ಪಕ್ಷಗಳು ‘ಉಚಿತ ಯೋಜನೆಗಳಿಂದ ದೇಶ ದಿವಾಳಿ ಆಗುತ್ತದೆ’ ಎಂದು ಹೇಳುತ್ತಿವೆ. ಆದರೆ, ರಾಜ್ಯ ಸರ್ಕಾರದ ಉಚಿತ ಯೋಜನೆಗಳಿಂದ ನಿಜವಾಗಿಯೂ ದೇಶ ದಿವಾಳಿ ಆಗುತ್ತಾ ಎಂಬುದರ ಕುರಿತು ಅರ್ಥಶಾಸ್ತ್ರರು ಏನು ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ನಂತರ ಅದರ ಬಗ್ಗೆ ಮಾತನಾಡಬೇಕು. ಕೇವಲ ವಾಟ್ಸಾಪ್‌ನಲ್ಲಿ ಬಂದ ಸುಳ್ಳು ಸುದ್ದಿಗಳನ್ನು ಓದಿ, ಅದನ್ನೇ ನಂಬಿಕೊಂಡು ಮಾತನಾಡಬಾರದು” ಎಂದರು.

ಸಹಬಾಳ್ವೆ ಉಡುಪಿಯ ಸಂಚಾಲಕ ಪ್ರಶಾಂತ್ ಜತ್ತನ್ನ ಮಾತನಾಡಿ, “ಸರ್ಕಾರದ ಎಲ್ಲ ಯೋಜನೆಗಳು ಬಡವರ ಪರವಾಗಿದ್ದು, ಅದನ್ನು ಅರ್ಹ ಬಡವರಿಗೆ ತಲುಪಬೇಕು. ಆಗ ಮಾತ್ರ ರಾಜ್ಯ ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಪ್ರಯೋಜನಕಾರಿ ಆಗುತ್ತದೆ” ಎಂದು ಹೇಳಿದರು.

Advertisements

ಕಾರ್ಯಕ್ರಮದಲ್ಲಿ ಈದಿನ.ಕಾಮ್‌ನ ಉಮರ್ ಯು ಹೆಚ್, ಪಂಚಾಯತ್ ರಾಜ್‌ನ ತರಭೇತಿದಾರ ಜಯಂತ್ ರಾವ್, ಸಹಬಾಳ್ವೆ ಉಡುಪಿಯ ವಿರೋನಿಕ ಕರ್ನೇಲಿಯೋ, ಯಾಸೀನ್ ಮಲ್ಪೆ, ನಾಗೇಶ್ ಉದ್ಯಾವರ್, ಫಾದರ್ ವಿಲಿಯಂ ಮಾರ್ಟಿಸ್, ಹುಸೇನ್ ಕೋಡಿಬೆಂಗ್ರೆ, ಅಜೀಝ್ ಉದ್ಯಾವರ್ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X