ಜೆಡಿಯು ಕಚೇರಿಯಲ್ಲಿ ಮೋದಿ ಚಿತ್ರ: ನಿತೀಶ್ ಕುಮಾರ್‌ ಅಣಕಿಸಿದ ತೇಜಸ್ವಿ ಯಾದವ್

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಜೆಡಿಯು ಕಚೇರಿಯಲ್ಲಿದ್ದು, ಈ ವಿಚಾರವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅಣಕಿಸಿದ್ದಾರೆ. ಹಾಗೆಯೇ ತೀಶ್ ಕುಮಾರ್ ಅವರಿಗೆ ವಿಶ್ವಾಸಾರ್ಹತೆಯ ಕೊರತೆ ಇದ್ದು, ಬಿಹಾರವನ್ನು ಇನ್ನು ಮುಂದೆ ನಿಭಾಯಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಎನ್‌ಡಿಟಿವಿಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಯಾದವ್, “ನಿತೀಶ್ ಕುಮಾರ್ ಅವರಿಗೆ ಈಗ ಪ್ರಜ್ಞೆಯಿಲ್ಲ. ಹಾಗಾಗಿ ಈ ಹಿಂದೆ ಎಂದೂ ಕಾಣದ ಮೋದಿಜಿಯವರ ಫೋಟೋ ಈಗ ಜೆಡಿಯು ಕಚೇರಿಯಲ್ಲಿ ಕಾಣಿಸಿದೆ. ಇದೇ ಸಿಎಂ ಅವರು ಮೋದಿಯವರ ಕೈಕುಲುಕುವ ವಿಚಾರದಲ್ಲಿ ವಿವಾದದಲ್ಲಿದ್ದರು. ಈಗ ಅವರ ಕಚೇರಿಯಲ್ಲಿ ಮೋದಿ ಅವರ ಫೋಟೋ ಇದೆ” ಎಂದು ಯಾದವ್ ಲೇವಡಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಪ್ರತಿಪಕ್ಷಗಳಲ್ಲಿ ಪ್ರಧಾನಿ ಮೋದಿಗಿಂತ ಅನುಭವಿ ನಾಯಕರಿದ್ದಾರೆ: ತೇಜಸ್ವಿ ಯಾದವ್

Advertisements

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸಲು ಮುಂದಾಗಿದ್ದರು. ಈ ವೇಳೆ ಪ್ರಧಾನಿ ನಿತೀಶ್ ಅವರ ಕೈ ಹಿಡಿದು ಹಸ್ತಲಾಘವ ಮಾಡಿದ್ದರು. ನಿತೀಶ್ ಅವರು ಮೋದಿ ಕಾಲಿಗೆ ನಮಸ್ಕಾರ ಮಾಡಲು ಹೋಗಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿತೀಶ್ ಟ್ರೋಲ್‌ಗೆ ಒಳಗಾಗಿದ್ದರು.

ಬೇರೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾ, ಮೈತ್ರಿ ಮುರಿಯುತ್ತಾ ಬಂದಿರುವ ನಿತೀಶ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಯಾದವ್ ಟೀಕಿಸಿದರು. “ಮುಖ್ಯಮಂತ್ರಿಗಳು ನನ್ನನ್ನು ಕೆಲವರು ಒಂದೆಡೆ ಕರೆದೊಯ್ದು, ಮತ್ತೆ ಅವರೇ ಹಿಂದೆ ಕರೆತಂದರು ಎನ್ನುತ್ತಾರೆ. ಹಾಗಾದರೆ ಅವರು ಯಾವುದನ್ನೂ ಅವರ ಒಪ್ಪಿಗೆಯಿಂದ ಮಾಡಿಲ್ಲವೇ” ಎಂದು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X