ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ್‌ ಜಾರಕಿಹೊಳಿ

Date:

Advertisements
  • ಸಿದ್ದರಾಮಯ್ಯ ಪೂರ್ಣಕಾಲಿಕ ಸಿಎಂ ವಿಚಾರ ನನಗೆ ಗೊತ್ತಿಲ್ಲ
  • ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗಿದೆ

ಮುಂದಿನ ಅವಧಿಗೆ ಮುಖ್ಯಮಂತ್ರಿ ಸ್ಥಾನ ಬೇಡುವೆ, ಈ ಅವಧಿಯ ಆಕಾಂಕ್ಷಿ ನಾನು ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಪೂರ್ಣಕಾಲಿಕ ಮುಖ್ಯಮಂತ್ರಿ ಆಗಿರುತ್ತಾರೋ ಇಲ್ಲವೋ ಎಂಬುದು ಹೈಕಮಾಂಡ್‌ ನಡುವೆಯಾದ ಚರ್ಚೆ. ನಮಗೆ ಆ ಬಗ್ಗೆ ಮಾಹಿತಿ ಇಲ್ಲ” ಎಂದರು.

“ಸಿಎಂ ಬದಲಾವಣೆ ಮಾತುಗಳು ನಮ್ಮ ಪಕ್ಷದಲ್ಲಿ ಕೇಳಿಬಂದಿಲ್ಲ. ಉತ್ತಮ ಆಡಳಿತ ನೀಡಬೇಕು ಎಂಬುದು ಎಲ್ಲರ ಆಶಯ. ಸಣ್ಣಪುಟ್ಟ ಅಸಮಾಧಾನಗಳು ಇವೆ. ಬೇಗ ಬಗೆಹರಿಯುತ್ತವೆ. ಕೇವಲ 34 ಸಚಿವ ಸ್ಥಾನಗಳು ಇವೆ. ಕೆಲವರಿಗೆ ಅವಕಾಶಗಳು ಸಿಕ್ಕಿಲ್ಲ. ಸಹಜವಾಗಿ ಮುನಿಸಿಕೊಂಡಿದ್ದಾರೆ” ಎಂದರು.

Advertisements

“ಆಗಸ್ಟ್‌ ಮೊದಲ ವಾರದಲ್ಲಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು ಸಭೆ ಕರೆದಿದ್ದಾರೆ. ಹಿರಿಯ ನಾಯಕರು ಹೋಗುತ್ತಿದ್ದೇವೆ. ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಸಭೆ ಇರುವ ಸಾಧ್ಯತೆ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

“ಬಿ ಕೆ ಹರಿಪ್ರಸಾದ್‌ ವಿಚಾರವಾಗಿ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮಾಡುವ ಮತ್ತು ಕೆಳಗೆ ಇಳಿಸುವುದನ್ನು ಬಿ ಕೆ ಹರಿಪ್ರಸಾದ್‌ ಅವರು ಕೆಲವು ರಾಜ್ಯಗಳಲ್ಲಿ ಮಾಡಿದ್ದಾರೆ. ಅವರ ಮಾತನ್ನು ನಮ್ಮ ರಾಜ್ಯಕ್ಕೆ ಹೋಲಿಸುವ ಅವಶ್ಯಕತೆ ಇಲ. ಹೈಕಮಾಂಡ್‌ ಮಟ್ಟದಲ್ಲಿ ಅವರು ಕೆಲಸ ಮಾಡುವಾಗ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ನಡೆದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X