ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ

Date:

Advertisements

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲಾ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಇಂದು (ಜು. 28) ಆರೋಪಿ ಶಕುಂತಲಾ ನಟರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.

Advertisements
ಶಕುಂತಲಾ

ತುಮಕೂರು ಮೂಲದ ಶಕುಂತಲಾ ನಟರಾಜ್​ ಈ ಥರ ವಿವಾದಾತ್ಮಕ ಟ್ವೀಟ್‌ ಮಾಡುತ್ತಿರುವುದು ಇದೇ ಮೊದಲೇನಲ್ಲ.
ಒಡಿಸ್ಸಾದಲ್ಲಾದ ತ್ರಿವಳಿ ರೈಲು ದರಂತದಲ್ಲಿ 250ಕ್ಕೂ ಹೆಚ್ಚು ಜನರು ಮೃತಪಟ್ಟಾಗ, ಆ ಘಟನೆಗೂ ಧರ್ಮದ ಬಣ್ಣ ಬಳಿದಿದ್ದರು.

ಘಟನಾ ಸ್ಥಳದಲ್ಲಿ ಮಸೀದಿ ಇದ್ದಿದ್ದರಿಂದಲೇ ತ್ರಿವಳಿ ರೈಲು ಅಪಘಾತವಾಗಿದೆ ಎಂಬರ್ಥದ ಪೋಸ್ಟ್‌ಗಳನ್ನು ಮಾಡಲಾಗಿತ್ತು. ವಾಸ್ತವದಲ್ಲಿ ಬಿಜೆಪಿ ಬೆಂಬಲಿಗರು ಹಂಚಿಕೊಂಡ ಫೋಟೋ ಮಸೀದಿಯದ್ದಾಗಿರಲಿಲ್ಲ, ಇಸ್ಕಾನ್‌ ದೇವಾಲಯವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X