ರಾಯಚೂರು | ಶಿಕ್ಷಣ ಸುಧಾರಣೆಗೆ ವಿಷಯವಾರು ಶಿಕ್ಷಕರ ನೇಮಕಕ್ಕೆ ಪ್ರತಿಭಟನೆ

Date:

Advertisements

ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಜುಲೈ ತಿಂಗಳಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಸುಲ್ತಾನ್ ಉದ್ಯಾನದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.

ದಲಿತ, ಅಲ್ಪಸಂಖ್ಯಾತರ, ಬಡವರ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.

ಸರ್ಕಾರ ವಿಷಯವಾರು ಶಿಕ್ಷಕರನ್ನು ನೇಮಿಸಬೇಕು. ಶಿಕ್ಷಣ ಗುಣಮಟ್ಟ ಸುಧಾರಣೆಗೆ ತಕ್ಷಣವೇ ಒಂದು ಕ್ರಿಯಾ ಯೋಜನೆ ರೂಪಿಸಿ 3 ತಿಂಗಳೊಳಗೆ ಅನುಷ್ಠಾನ ಗೊಳಿಸಬೇಕು. ಶಾಲೆಗಳಲ್ಲಿ ಕೊಠಡಿಗಳು, ಬೆಂಚು, ವಿದ್ಯುತ್, ಶೌಚಾಲಯ, ಕುಡಿಯುವ ನೀರು,ಗ್ರಂಥಾಲಯ ಹಾಗೂ ಮೂಲಸೌಕರ್ಯ ಒದಗಿಸಬೇಕು ಹಾಗೂ ಪ್ರತಿ ಶಾಲೆಗೊಬ್ಬರು ಪರಿಚಾರಕರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಕಾರ ಗುಣಮಟ್ಟ ಶಿಕ್ಷಣ ಮಾತ್ರ ದಲಿತರ ಜೀವನ ಸುಧಾರಣೆ ಮಾಡಬಹುದು ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣದ ಸುಧಾರಣೆಗೆ ಕನಿಷ್ಠ ಗಮನ ನೀಡದೇ ದೊಡ್ಡ ಪ್ರಮಾಣದಲ್ಲಿ ಖಾಸಗೀಕರಣಕ್ಕೆ ಉತ್ತೇಜಿಸುತ್ತಿದೆ. ಶೇಕಡಾ 80 ರಷ್ಟು ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಮೇಲಿನ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿ ಜಿಲ್ಲೆಯಲ್ಲಿ ಡಿಡಿಪಿಐಗಳು ಶಾಲೆಯ ಸ್ಥಿತಿಗತಿಗಳ ಶ್ವೇತ ಪತ್ರ ಬಿಡುಗಡೆ ಮಾಡಬೇಕು. ಕೆಕೆಆರ್ ಡಿಬಿ ಮತ್ತು ಪ್ರಾದೇಶಿಕ ಶಿಕ್ಷಣ ಆಯುಕ್ತರು 2 ತಿಂಗಳ ಒಳಗೆ ವರದಿ ಸಲ್ಲಿಸಬೇಕು. ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವರು, ಶಿಕ್ಷಣ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ತಜ್ಞರ ಒಳಗೊಂಡಂತೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಮೇಲ್ವಿಚಾರಣೆ ಮಾಡಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಹಿಳಾ ಶೌಚಾಲಯ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ; ತೆರುವಿಗೆ ಖಾಲಿ ಚೊಂಬು ಹಿಡಿದು ಪ್ರತಿಭಟನೆ

ಪ್ರತಿಭಟನೆಯಲ್ಲಿ ಭೀಮಮ್ಮ, ಮರಿಯಮ್ಮ, ಸುನಿತಾ, ವಿದ್ಯಾ ಪಾಟೀಲ್, ವೀಣಾ, ಭಾಗ್ಯಲಕ್ಷ್ಮೀ, ಶ್ರೀದೇವಿ, ರೂಪಾ, ಸೀತಾ, ಜಿ.ಬಸವರಾಜ ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X