ವಿಜಯಪುರ | ಫೇಸ್ ಕ್ಯಾಪ್ಚರ್ ಪದ್ಧತಿ ಕೈಬಿಡಲು ಅಂಗನವಾಡಿ ನೌಕರರ ಒತ್ತಾಯ

Date:

Advertisements

ಅಂಗನವಾಡಿ ನೌಕರು ಪ್ರಸ್ತುತ ನಿರ್ವಹಿಸುತ್ತಿರುವ ಫಲಾನುಭವಿಗಳ ಪೇಸ್ ಕ್ಯಾಪ್ಚರ್ ಪದ್ದತಿಯನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಸಂಸದ ರಮೇಶ್‌ ಜಿಗಜಿಣಗಿ ಅವರಿಗೆ ಎಐಯುಟಿಯುಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕ ಮನವಿ ಸಲ್ಲಿಸಿತು.

“ಅಂಗನವಾಡಿ ಫಲಾನುಭವಿಗಳಿಗೆ ಆಹಾರ ನಿಡಲು ಕಡ್ಡಾಯವಾಗಿ ಪೇಸ್‌ ಕ್ಯಾಪ್ಚರ್ ಮಾಡಬೇಕೆಂದು ಕೇಂದ್ರ ಸರಕಾರ ಜಾರಿಗೂಳಿಸಿದ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಬಾಣಂತಿ, ಮಕ್ಕಳಿಗೆ ಸೌಲಭ್ಯಗಳನ್ನು ನಿಡಲು ಅವರ ಫೇಸ್ ಕ್ಯಾಪ್ಚರ್ ಮಾಡುವ ಸಂದರ್ಭದಲ್ಲಿ ಎದುರಾಗುವ ಸರ್ವರ್ ಸಮಸ್ಯೆ, ಇಲಾಖೆಯ ಪೋನ್ ನಲ್ಲಿ ಎಂಟ್ರಿ ಆಗದೆ ಇರುವುದು, ಫಲಾನುಭವಿಗಳು ಸರಿಯಾಗಿ ಒಟಿಪಿ ಹೇಳದೆ ಇರುವುದು, ಬಹುತೇಕ ಫಲಾನುಭವಿಗಳು ಬಡವರಾಗಿರುವುದರಿಂದ ತಮ್ಮ ಪೋನ್ ರಿಚಾರ್ಜ್ ಮಾಡಿಸಿರಲ್ಲ, ಆಗ ಅವರ ಪೋನ್ಗೆ ಒಟಿಪಿ ಹೋಗುವುದಿಲ್ಲ, ನಂಬರ್ ಬದಲಾವಣೆ ಇನ್ನೂ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಪೇಸ್ ಕ್ಯಾಪ್ಚರ್ ಮಾಡಬೇಕಾಗಿದೆ. ಇದರಿಂದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಕಲಿಸುವುದು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಯುವವರೆಗೂ ಫೇಸ್‌ ಕ್ಯಾಪ್ಚರ್‌ ಪದ್ಧತಿಯನ್ನು ತಡೆಹಿಡಿಯಬೇಕು ಅಥವಾ ಕೈಬಿಡಬೇಕು” ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

Advertisements

ಈ ವೇಳೆ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಹೆಚ್ ಟಿ, ಉಪಾಧ್ಯಕ್ಷೆ ನಿಂಗಮ್ಮ ಮಠ, ಸಾವಿತ್ರಿ ನಾಗರತ್ತಿ, ಕಾರ್ಯದರ್ಶಿ ಲಕ್ಮೀ ರೇಣುಕಾ ಹಡಪದ, ಸವಿತಾ ತೇರದಾಳ, ಸತ್ಯಮ ಹಡಪದ, ಭಾಗ್ಯ ಇಂಡಿ, ವಿಜಯಲಕ್ಷ್ಮಿ ಹುಣಶ್ಯಾಳ, ಸರಸ್ವತಿ ಮದ್ರಕಿ, ಶಾಂತಾ, ಗಂಗಮ್ಮ ಉಪಲದಿನ್ನಿ ಇದ್ದರು.

ಈದಿನ
ಈ ದಿನ ಸಂಪಾದಕೀಯ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X