ಶಿವಮೊಗ್ಗ | ಮೇಗರವಳ್ಳಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ; ಐಐಟಿ ಪ್ರವೇಶ ಪಡೆದ ಸುಶಾಂತ್ ಪ್ರಭುಗೆ ಸನ್ಮಾನ

Date:

Advertisements

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲಾಜಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇಗರವಳ್ಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಐಟಿಗೆ ಪ್ರವೇಶ ಪಡೆದ ಸುಶಾಂತ್ ಪ್ರಭುವಿಗೆ ಗೌರವ ಸನ್ಮಾನ ‌‌ಮಾಡಲಾಯಿತು.‌

1001841319

ಇತ್ತೀಚಿಗೆ, ವಿಜೇತ ಎಂ ಕೆ ಇವರ ಸಾರಥ್ಯದಲ್ಲಿ ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಕಲಿತು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 5 ನೇ ರ್ಯಾಂಕ್ ಪಡೆದ ವಿದ್ಯಾರ್ಥಿ ಸುಮುಖ್ ಸೇರಿದಂತೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಹಾಗೂ ಐಐಟಿ ಪ್ರವೇಶ ಪಡೆದ, ಮೇಗರವಳ್ಳಿಯ ಶ್ರೀಮತಿ ಸುಜಾತ ಮತ್ತು ನರಸಿಂಹ ಪ್ರಭು ಅವರ ಸುಪುತ್ರ ಸುಶಾಂತ್ ಪ್ರಭು ಅವರಿಗೆ , ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲಾಜಿ ಸ್ಪೋರ್ಟ್ಸ್ ಕ್ಲಬ್ ಮೇಗರವಳ್ಳಿ ಇವರುಗಳ ವತಿಯಿಂದ ಸನ್ಮಾನ ಮಾಡಲಾಯಿತು, ಹಾಗೂ ಪ್ರತಿ ವಿದ್ಯಾರ್ಥಿಗೂ ನಗದು ವಿದ್ಯಾರ್ಥಿ ವೇತನ ನೀಡುವುದರೊಂದಿಗೆ, ಶಾಲು, ಹಾರ ಹೊದಿಸಿ, ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನ ಮಾಡಲಾಯಿತು.

ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷರಾದ ಬಾಳೇಹಳ್ಳಿ ಪ್ರಭಾಕರ್ ಮಾತಾನಾಡಿ, ಮೇಗರವಳ್ಳಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಲಲಿತಮ್ಮ ಅವರ ಹೆಸರಿನಲ್ಲಿ ಅವರ ಸುಪುತ್ರ ವಿಜೇತ ಶೆಟ್ಟಿ ಮಾಡುತ್ತಿರುವ ಇಂತಹ ಕಾರ್ಯಗಳು ಸಮಾಜಕ್ಕೆ ಮಾದರಿಯಾದುದು ಎಂದರು, ಜೊತೆಗೆ ‌ಮಕ್ಕಳಿಗೆ ನಗದು ವಿದ್ಯಾರ್ಥಿ ವೇತನ ನೀಡಿ ಸನ್ಮಾನ ಮಾಡಿರುವುದು ನಮಗೆಲ್ಲಾ ಮಾದರಿ ಕಾರ್ಯವಾಗಿದೆ ಎಂದರು.

Advertisements

ಮುಂದಿನ ದಿನಗಳಲ್ಲಿ ಪ್ರೋತ್ಸಾಹ ನೀಡಲು ಇವರಿಗೆ ಇನ್ನಷ್ಟು ಶಕ್ತಿ ಸಿಗಲಿ ಹಾಗೂ ಎಲ್ಲಾ ಮಕ್ಕಳು ಮುಂದಿನ ದಿನಗಳಲ್ಲಿ ಇಂತಹ ಕಾರ್ಯದ ಮಹತ್ವವನ್ನು ಅರಿತು ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ, ಇದೇ ರೀತಿಯಲ್ಲಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ, ಬಾಳೇಹಳ್ಳಿ ಪ್ರಭಾಕರ್, ವಿಜೇತ ಎಂ ಕೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪಟೇಲ್ ವೆಂಕಟೇಶ ಹೆಗಡೆ, ಗ್ರಾಮ ಪಂಚಾಯತಿ ಸದಸ್ಯರಾದ ಅಜಿತ್ ಅಣ್ಣುವಳ್ಳಿ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು ಪೋಷಕರು, ಸಾಧಕ ಮಕ್ಕಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X