VIDEO | ಅಂತಾರಾಷ್ಟ್ರೀಯ ಪಂದ್ಯ ನಡೆಯುವಾಗ ಮೈದಾನಕ್ಕೆ ನುಗ್ಗಿದ 7 ಅಡಿ ಉದ್ದದ ಹಾವು

Date:

Advertisements

ಕ್ರೀಡಾ ಪಂದ್ಯಗಳು ನಡೆಯುವಾಗ ಹಾವು ಕಾಣಿಸಿಕೊಳ್ಳುವುದು ಹೊಸ ವಿಷಯವಲ್ಲ. ಆದರೆ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವಾಗ ಆಡಳಿತ ಮಂಡಳಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುತ್ತದೆ. ಬಾಂಗ್ಲಾದೇಶ-ಶ್ರೀಲಂಕಾ ನಡುವಣ ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದ ವೇಳೆ ಹಾವು ಏಕಾಏಕಿ ಮೈದಾನಕ್ಕೆ ನುಗ್ಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿದ್ದ ಮೊದಲ ಏಕದಿನ ಪಂದ್ಯದ ವೇಳೆ ಮೈದಾನಕ್ಕೆ ಹಾವು ನುಗ್ಗಿದೆ. ಅಲ್ಲದೆ ಕೆಲ ಹೊತ್ತು ಮೈದಾನದಲ್ಲೇ ಓಡಾಡಿಕೊಂಡಿದೆ. ಹಾವು ಬಂದ ಕಾರಣ ಕೆಲ ಹೊತ್ತು ಪಂದ್ಯ ಸ್ಥಗಿತಗೊಂಡಿತು. ಆಟಗಾರರು ಸ್ವಲ್ಪ ಗಾಬರಿಗೊಂಡರು.

ಆ ಬಳಿಕ ಭದ್ರತಾ ಸಿಬ್ಬಂದಿಗಳು ಆಗಮಿಸಿ, ಹಾವನ್ನು ಮೈದಾನದಿಂದ ಹೊರಹಾಕುವಲ್ಲಿ ಯಶಸ್ವಿಯಾದರು. ಆ ನಂತರ ಪಂದ್ಯವನ್ನು ಮುಂದುವರೆಸಲಾಯಿತು. ಇದೀಗ ಮೈದಾನದಲ್ಲಿ ಓಡಾಡುತ್ತಿದ್ದ ಹಾವಿನ ವಿಡಿಯೋ ವೈರಲ್ ಆಗಿದೆ.

Advertisements

ಇದನ್ನು ಓದಿದ್ದೀರಾ? ಅಮನ್ಜೋತ್‌ ಆಲ್‌ರೌಂಡರ್ ಆಟ: ಇಂಗ್ಲೆಂಡ್‌ ವಿರುದ್ಧ ಭಾರತದ ವನಿತೆಯರಿಗೆ ಸತತ 2ನೇ ಜಯ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.2 ಓವರ್​ಗಳಲ್ಲಿ 244 ರನ್​ಗಳಿಸಿ ಆಲೌಟ್ ಆಗಿತು. ಈ ಸುಲಭ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ತಂಡವು 1 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಬಾಂಗ್ಲಾದೇಶ 167 ರನ್​ಗಳಿಗೆ ಆಲೌಟ್ ಆಗಿತು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಏಕದಿನ ಪಂದ್ಯದಲ್ಲಿ 77 ರನ್​ಗಳ ಭರ್ಜರಿ ಜಯ ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X