ಗದಗ | ಮತಗಟ್ಟೆ ಮಟ್ಟದ ಚುನಾವಣಾ ಭಾಗದ ಕೆಲಸ ನೀಡದಂತೆ ಅಂಗನವಾಡಿ ನೌಕರರು ಜಿಲ್ಲಾಧಿಕಾರಿಗೆ ಮನವಿ

Date:

Advertisements

“ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್‌.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ ಅಂಗನವಾಡಿ ನೌಕರರಿಗೆ ಬಿ.ಎಲ್.ಓ. ಕೆಲಸವನ್ನು ನೀಡಬಾರದು” ಎಂದು ಸಿಐಟಿಯು ಮುಖಂಡ ಮಹೇಶ ಹಿರೇಮಠ ಒತ್ತಾಯಿಸಿದರು.

“ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಮತಗಟ್ಟೆ ಮಟ್ಟದ (ಬಿ.ಎಲ್.ಓ) ಚುನಾವಣಾ ಭಾಗದ ಕೆಲಸ ನೀಡದಂತೆ ಜಿಲ್ಲಾ ಪಂಚಾಯತ ಸಿಇಒ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. 

“ಈ ಎಲ್ಲ ಕೆಲಸದ ಮಧ್ಯೆ ಅಂಗನವಾಡಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ೧೦.೦೦ ರಿಂದ ೧.೩೦ ರವರೆಗೆ ಕೆಲಸವಿದೆ. ಇಷ್ಟೆಲ್ಲಾ ಕೆಲಸವಿದ್ದರೂ ಬಿ.ಎಲ್.ಓ. ಕೆಲಸ ಮಾಡಲು ಹೋದರೆ ನಮ್ಮ ಅಂಗನವಾಡಿ ಮಕ್ಕಳ ಶಾಲಾ ಪೂರ್ವ ಶಿಕ್ಷಣ ಕುಂಠಿತಗೊಳ್ಳುತ್ತದೆ. ಆದ ಕಾರಣ ನಮ್ಮ ಇಲಾಖೆಯ ಕೆಲಸ ಹೊರತುಪಡಿಸಿ ಬೇರೆ ಕೆಲಸಗಳನ್ನು ಮಾಡಲು ಆಗುವುದಿಲ್ಲ” ಎಂದು ವಿನಂತಿಸಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಪುಸ್ತಕಗಳು ನಮ್ಮ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳು: ಡಾ.ವಿಜಯಮಹಾಂತೇಶ ದಾನಮ್ಮನವರ

ಈ ಸಂದರ್ಭದಲ್ಲಿ ಮಾರುತಿ ಚಿಟಗಿ, ಪೀರು ರಾಠೋಡ, ಅಧ್ಯಕ್ಷರಾದ ಸಾವಿತ್ರಿ ಸಬ್ನಿಸ್, ಶಾರದಾ ರೋಣದ, ಗಂಗಮ್ಮ ದೇವರಡ್ಡಿ, ಸುಶೀಲಾ ಚಲವಾದಿ, ಗಿರಿಜಾ ಮಾಚಕ್ಕನವರ, ಕವಿತಾ ಬಡಿಗೇರ, ನೀಲಮ್ಮ ಹಿರೇಮಠ, ಅನ್ನಪೂರ್ಣ ಸಾಲಿಮಠ, ಶಾರದಾ ಹಳೇಮನಿ, ಮಂಗಲಾ ಪಟ್ಟಣಶೆಟ್ಟಿ, ಕಮಲಾಕ್ಷಿ ಬೀಳಗಿ, ಗಂಗಮ್ಮ ಮಾದರ, ಜ್ಯೋತಿ, ಶರಣಮ್ಮ ವಾಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X