ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

Date:

Advertisements

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್‌ ರವಿಕುಮಾರ್‌ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದ ವಿಧಾನ ಪರಿಷತ್ ಮುಖ್ಯ‌ ಸಚೇತಕ ಸಲೀಂ ಅಹಮದ್ ನಿಯೋಗ ಮನವಿ ಸಲ್ಲಿಸಿದೆ.

ಗುರುವಾರ ಸಭಾಪತಿಗಳನ್ನು ಭೇಟಿಯಾದ ಸಲೀಂ ಅಹ್ಮದ್‌ ನಿಯೋಗವು, ಎನ್‌ ರವಿಕುಮಾರ್‌ ಹೇಳಿಕೆ ಸಾರ್ವಜನಿಕವಾಗಿ ಮತ್ತು ಮಾಧ್ಯಮ/ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಗೊಂಡಿದ್ದು, ಅಧಿಕಾರಿಕ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿ ವ್ಯಕ್ತಿತ್ವವನ್ನು ಅವಹೇಳನಗೊಳಿಸುವ ಕೆಲಸವಾಗಿದೆ. ಈ ರೀತಿಯ ಹೇಳಿಕೆಗಳು ಸರ್ಕಾರದ ಅತೀ ಉನ್ನತ ಪದವಿಯ ನಾಗರಿಕ ಸೇವಾಧಿಕಾರಿಗಳ ಧೈರ್ಯ ಮತ್ತು ಪ್ರಾಮಾಣಿಕತೆಗೆ ಚ್ಯುತಿ ತರುತ್ತದೆ” ಎಂದು ಮನವರಿಕೆ ಮಾಡಿತು.

ಎನ್‌ ರವಿಕುಮಾರ್‌ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಧಾನ ಪರಿಷತ್‌ನ ನಿಯಮಗಳು ಹಾಗೂ ನೈತಿಕ ಮಾರ್ಗಸೂಚಿಗಳ ಪ್ರಕಾರ ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸಭಾಪತಿಗಳನ್ನು ನಿಯೋಗ ಆಗ್ರಹಿಸಿತು.

Advertisements

“ತ್ವರಿತ ಕ್ರಮ ಕೈಗೊಂಡಲ್ಲಿ ಸಾರ್ವಜನಿಕ ಸೇವೆಯ ಗೌರವ ಮತ್ತು ಪರಿಷತ್ತಿನ ಪವಿತ್ರತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಈ ನಡೆ ಸಂಸತ್ತಿನ ನೀತಿ ಸಂಹಿತೆಯ ನಿಯಮಗಳಿಗೆ ವಿರುದ್ಧವಾಗಿದ್ದು, ಮಹಿಳಾ ಅಧಿಕಾರಿಗಳಿಗೆ ಅಗೌರವ ಪ್ರದರ್ಶಿಸುವ ಪ್ರವೃತ್ತಿಯಾಗಿರುತ್ತದೆ. ವ್ಯಕ್ತಿಗತ ನಿಂದನೆ ಮಾಡುವ ಮೂಲಕ, ಸಮಾಜದಲ್ಲಿ ಕೀಳು ಅಭಿರುಚಿ ಎಬ್ಬಿಸುವ ಈ ಹೇಳಿಕೆ ವಿಧಾನ ಪರಿಷತ್ ಸದಸ್ಯನ ಸ್ಥಾನಕ್ಕೆ ಒಪ್ಪದಂತಹ ಹಾಗೂ ಪರಿಷತ್ತಿನ ಗೌರವವನ್ನು ಕುಗ್ಗಿಸುವ ಪ್ರವೃತ್ತಿಯಾಗಿರುತ್ತದೆ” ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಸಲೀಂ ಅಹಮದ್ ನಿಯೋಗದಲ್ಲಿ ಬಿ ಕೆ ಹರಿಪ್ರಸಾದ್, ಮಂಜುನಾಥ್ ಭಂಡಾರಿ, ನಾಗರಾಜ ಯಾದವ್, ಬಲ್ಕಿಸ್ ಬಾನು
ಮಲ್ಲಾಜಮ್ಮ, ರಾಮೋಜಿ ಗೌಡ, ಡಿಟಿ ಶ್ರೀನಿವಾಸ್ ಹಾಗೂ ರಮೇಶ್ ಬಾಬು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X