ಸರ್ಕಾರ ಬೇರೆ ಕಡೆ ಬಿಜಿನೆಸ್‌ ಮಾಡಲಿ, ರೈತರ ಭೂಮಿ ಕಸಿಯುವ ಅಧಿಕಾರ ಯಾರಿಗೂ ಇಲ್ಲ: ರಾಕೇಶ್‌ ಟಿಕಾಯತ್‌

Date:

Advertisements

ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ, ರೈತರು ಭೂಮಿ ಕೊಡುವುದಿಲ್ಲ ಎಂದ ಮೇಲೆ ರೈತರಿಗೆ ಅವರ ಭೂಮಿ ಕಸಿಯಲು ಯಾವುದೇ ಅಧಿಕಾರ ಇಲ್ಲ ಎಂದು ಸರ್ಕಾರಕ್ಕೆ ರೈತ ನಾಯಕ ರಾಕೇಶ್‌ ಟಿಕಾಯತ್‌ ಸಂದೇಶ ನೀಡಿದರು.

ದೇವನಹಳ್ಳಿ ರೈತ ಹೋರಾಟದ ಮುಂದಿನ ಯಾವುದೇ ನಿರ್ಧಾರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಬೆಂಬಲ ಇರಲಿದೆ ಎಂದು ಘೋಷಿಸಿ ಗುರುವಾರ ಮಾತನಾಡಿದರು.

ಚನ್ನರಾಯಪಟ್ಟ ರೈತರ ಚಳವಳಿ ನಡೆಯುತ್ತಿರುವುದು ಭೂಮಿಯ ರಕ್ಷಣೆಗಾಗಿ, ಇಡೀ ದೇಶದ ಕಣ್ಣು ಈ ಚಳವಳಿಯ ಮೇಲಿದೆ, ಪೂರ್ತಿ ಸಾವಿರದ ಇನ್ನೂರು ದಿನ ನಡೆದಿದೆ, ಬಹಳಷ್ಟು ಚಳವಳಿಗಳಲ್ಲಿ ರೈತರು ಸರ್ಕಾರದ ಜೊತೆಗೆ ಮಾತುಕತೆಗೆ ಕೂರುತ್ತಾರೆ, ಆದರೆ ಇಲ್ಲಿ ರೈತರು ಹೇಳಿದ್ದಾರೆ, ನಮಗೆ ಮಾತುಕತೆ ಬೇಕಾಗಿಯೇ ಇಲ್ಲ, ನಾವು ಭೂಮಿ ಕೊಡುವುದಿಲ್ಲ ಎಂದು. ಆ ಕಾರಣದಿಂದ ಇದು ಬಹಳ ವಿಶೇಷವಾದ ಹೋರಾಟ ಎಂದು ಹೇಳಿದರು.

Advertisements

“ದೆಹಲಿಯಲ್ಲಿ ಎಸ್‌ಕೆಎಂ ಸಭೆಯಲ್ಲಿ ಈಗಾಗಲೇ ಈ ಹೋರಾಟದ ವಿಚಾರ ಅಜೆಂಡಾದಲ್ಲಿದೆ, ಒಂದು ವೇಳೆ ನಾಳೇಯ ಸಭೆಯಲ್ಲಿ ಒಳ್ಳೆಯ ನಿರ್ಧಾರದ ಜೊತೆಗೆ ಹೋರಾಟ ಮುಕ್ತಾಯ ಆಗದಿದ್ದರೆ, ಮುಂದೆಯೂ ಅದನ್ನು ಚರ್ಚೆಯಲ್ಲಿ ಸೇರಿಸಿಕೊಳ್ಳುತ್ತೇವೆ, ಎಸ್‌ಕೆಎಂ ಇಲ್ಲಿನ ರೈತರು ಮತ್ತು ಸಂಘಟನೆಗಳೂ ಏನು ನಿರ್ಧಾರ ಕೈಗೊಂಡರೂ ಅದರ ಜೊತೆಗಿರುತ್ತದೆ“ ಎಂದು ಹೇಳಿದರು.

ಡಾ. ದರ್ಶನ್‌ ಪಾಲ್‌ ಮಾತನಾಡಿ, “ಬೆಂಗಳೂರು ನಗರಕ್ಕೆ ಇಷ್ಟು ಹತ್ತಿರವಿದ್ದೂ ತಮ್ಮ ಭೂಮಿಯನ್ನು ಬಿಡುವುದಿಲ್ಲವೆಂದು ಸುಮಾರು ಮೂರೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಅಭಿನಂದನೆಗಳು. ಈ ಹೋರಾಟ ಮಾದರಿಯಾದದ್ದು. ಈಚೆಗೆ ಎಸ್‌.ಕೆ.ಎಂ ಸಭೆ ನಡೆದು ಎರಡು ವಿಚಾರಗಳಿಗೆ ಬೆಂಬಲವನ್ನು ನೀಡಬೇಕೆಂದು ನಿರ್ಧಾರವಾಗಿದೆ” ಎಂದರು.

ಉತ್ತರಪ್ರದೇಶದ ಎಸ್‌.ಕೆ.ಎಂನ ರಾಷ್ಟ್ರೀಯ ನಾಯಕ ಯುಧ್‌ವೀರ್‌ ಸಿಂಗ್‌ ಮಾತನಾಡಿ, “ರೈತರು ಹೆಚ್ಚೂಕಡಿಮೆ 1200 ದಿನಗಳ ಕಾಲ ಹೋರಾಟ ನಡೆಸಿದ್ದಾರೆ ಎಂದರೆ ಅದೇನೂ ಕಡಿಮೆ ವಿಚಾರವಲ್ಲ, ಸ್ವತಃ ಸಿದ್ಧರಾಮಯ್ಯ ಅವರು ಈ ರೈತರಿಗೆ ಭೂಸ್ವಾಧೀಣವನ್ನು ರದ್ದುಪಡಿಸುವ ಭರವಸೆ ಚುನಾವಣೆಗೆ ಮುಂಚೆ ನೀಡಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳಬೇಕಿದೆ” ಎಂದು ಆಗ್ರಹಿಸಿದರು.

ಡಾ. ಸುನಿಲಮ್‌ ಮಾತನಾಡಿ, “ಈ ರೈತ ಆಂದೋಲನದ ಸಮಯದಲ್ಲಿ ನಡೆದ ಪೊಲೀಸ್‌ ದೌರ್ಜನ್ಯ ಖಂಡನೀಯ, ದಬ್ಬಾಳಿಕೆ ನಡೆಸಿದ ಪೊಲೀಸರ ಮೇಲೆ ಕಾನೂನು ಕ್ರಮ ಆಗಬೇಕೆಂದು ಎಸ್‌.ಕೆ.ಎಂ ಒತ್ತಾಯಿಸುತ್ತದೆ. ಹೋರಾಟದ ಪ್ರತಿನಿಧಿಗಳೊಂದಿಗೆ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರೆದಿರುವ ಸಭೆ ಇದೆ, ಅದು ಯಶಸ್ವಿಯಾಗುತ್ತದೆಂದು ನಾವು ಭರವಸೆ ಇಟ್ಟಿದ್ದೇವೆ. ಕಾಂಗ್ರೆಸ್‌ ನಾಯಕ ರಾಜೀವ್‌ ಗಾಂಧಿಯವರು ಇಡೀ ದೇಶಾದ್ಯಂತ ಸುತ್ತಾಡಿ ಎನ್‌ಡಿಎ ಸರ್ಕಾರದ ಕರಾಳ ಕಾನೂನುಗಳ ವಿರುದ್ಧ ಮಾತನಾಡುವವರು, ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅವರು ರೈತರಿಗೆ ನ್ಯಾಯ ಸಿಗುವುದನ್ನು ಖಾತ್ರಿ ಪಡಿಸಬೇಕಲ್ಲವೇ” ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಜು.4 ರಂದು ಕರೆದಿರುವ ಸಭೆಯಲ್ಲಿ ಭೂಸ್ವಾಧೀನ ರದ್ದುಮಾಡುವ ನಿರ್ಧಾರ ಪ್ರಕಟಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಸಂಯುಕ್ತ ಕಿಸಾನ್‌ಮೋರ್ಚಾದ ನಾಯಕರು. ಸಭೆಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ನಾಯಕರಾದ ವಿಜು ಕೃಷ್ಣನ್‌, ಕರ್ನಾಟಕದ ಜನಚಳುವಳಿಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಎಚ್ .ಎಂ.ಬಸವರಾಜಪ್ಪ, ಚುಕ್ಕಿ ನಂಜುಂಡಸ್ವಾಮಿ, ಟಿ. ಯಶವಂತ್‌ ಮತ್ತು ಸಾಮಾಜಿಕ ಹೋರಾಟಗಾರರರಾದ ಎಸ್‌.ಆರ್.ಹಿರೇಮಠ್‌ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X