ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟು ಕ್ಷಮೆ ಕೇಳಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈಗ ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ತಮ್ಮ ಮಲಿನ ಮನಸಿನ ಕೊಳಕು ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ‘ಬಿಜೆಪಿಯವರು ಕೇಳುವ ಕ್ಷಮೆಯು ಪಶ್ಚಾತಾಪದ ಕ್ಷಮೆಯಲ್ಲ, ಪಲಾಯನವಾದದ ಕ್ಷಮೆ ಎನ್ನುವುದನ್ನು ನಾನು ಹಿಂದೆಯೇ ಹೇಳಿದ್ದೆ’ ಎಂದಿದ್ದಾರೆ.
‘ಮಹಿಳಾ ಅಧಿಕಾರಿಗಳನ್ನು ನಿಂದಿಸುವುದು ಎಂಎಲ್ಸಿ ರವಿಕುಮಾರ್ ಅವರಿಗೆ ಚಟವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಎಂಬುದು ನನ್ನ ಭಾವನೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಿಜೆಪಿಯವರು ಕೇಳುವ ಕ್ಷಮೆಯು ಪಶ್ಚಾತಾಪದ ಕ್ಷಮೆಯಲ್ಲ, ಪಲಾಯನವಾದದ ಕ್ಷಮೆ ಎನ್ನುವುದನ್ನು ನಾನು ಹಿಂದೆಯೇ ಹೇಳಿದ್ದೆ,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 3, 2025
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟು ಕ್ಷಮೆ ಕೇಳಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಈಗ ಮತ್ತೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ತಮ್ಮ ಮಲಿನ ಮನಸಿನ ಕೊಳಕು ನಾಲಿಗೆ…
‘ಮಾಡಿದ ತಪ್ಪನ್ನೇ ಪದೇ ಪದೇ ಮಾಡುವುದು, ಮತ್ತೆ ಮತ್ತೆ ಕ್ಷಮೆ ಕೇಳುವುದು ಬಿಜೆಪಿಯವರಿಗೆ ಸಾವರ್ಕರ್ ರಿಂದ ಬಂದ ರಕ್ತಗತ ಗುಣ ಇರಬಹುದು! ಮಹಿಳಾ ಅಧಿಕಾರಿಗಳನ್ನೇ ಈ ಪರಿ ನಿಂದಿಸುವ ಬಿಜೆಪಿಯವರು ಸಾಮಾನ್ಯ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳಬಹುದು?’ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ಬೀದರ್ | ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವು
‘ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವ ರವಿಕುಮಾರ್ ಅವರು ಘನತೆಯುಕ್ತ ಪರಿಷತ್ನಲ್ಲಿ ಮುಂದುವರೆಯಲು ಅನರ್ಹರು. ರವಿಕುಮಾರ್ ಇರಬೇಕಾಗಿರುವುದು ಪರಿಷತ್ನಲ್ಲಿ ಅಲ್ಲ, ನಿಮ್ಹಾನ್ಸ್ನಲ್ಲಿ’ ಎಂದು ಟೀಕಿಸಿದರು.