ಶಿವಮೊಗ್ಗ ಗ್ರಾಮಾಂತರದಲ್ಲಿ ಇಂದು ಮುಂಜಾನೆ ಕುಂಸಿ ಮತ್ತು ಚಿಕ್ಕದಾನವಂದಿ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾಗಿದ್ದ ಪ್ರಯಾಣಿಕರು ಸಿಗಂದೂರಿಗೆ ತೆರಳುತ್ತಿದ್ದರು. ಮುಂಜಾನೆ ಸುಮಾರು 5:30ರ ಸುಮಾರಿಗೆ ಕುಂಸಿ – ಚಿಕ್ಕದಾನವಂದಿ ಗ್ರಾಮದ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯೊಂದು ಅಡ್ಡ ಬಂದಿದೆ.

ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ, ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.ಘಟನೆಯಿಂದ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಟಿಟಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.