ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣ: ಎಫ್‌ಐಆರ್ ದಾಖಲು

Date:

Advertisements

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿರುವ ದೂರನ್ನು ಪರಿಗಣಿಸಿರುವ ಧರ್ಮಸ್ಥಳ ಪೊಲೀಸರು ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶಕ್ಕೆ ಸಂಬಂಧಿಸಿದ BNS 211 ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್‌ಪಿ ಕಚೇರಿಯ ದೂರಿನ ಅನ್ವಯ ಎನ್‌ಸಿಆರ್‌ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಮಾನ್ಯ ಜೆಎಂಎಫ್‌ಸಿ ಬೆಳ್ತಂಗಡಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪ್ರಕರಣದ ಗಂಭೀರತೆ, ದೂರಿನ ಜೊತೆಗೆ ನೀಡಿದ ವಿವರಣೆ ಸಾಕ್ಷಿಗಳ ಸತ್ಯಾ ಸತ್ಯತೆ ಪರಿಶೀಲಿಸಿ ಪೊಲೀಸರು ಎಫ್‌ಐಆರ್‌ ದಾಖಲಿದ್ದಾರೆ.

“ನನಗೆ ನಿರಂತರ ಪ್ರಾಣ ಬೆದರಿಕೆಯೊಡ್ಡಿ, ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊಲೆಗೊಳಗಾದ ಹಾಗೂ ಅತ್ಯಾಚಾರಕ್ಕೊಳಗಾಗಿ ಕೊಲೆಗೊಳಗಾದ ಅನೇಕ ಮೃತ ದೇಹಗಳು ಮತ್ತು ಸಾಕ್ಷ್ಯಗಳನ್ನು ನನ್ನಿಂದ ಬಲವಂತವಾಗಿ ಹೂತುಹಾಕಿಸಿದ್ದಾರೆ. ನನ್ನಿಂದ ಹೂತು ಹಾಕಿಸಿರುವ ಮೃತ ದೇಹಗಳ ಕಳೇಬರಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರತೆಗೆಸುವಂತೆ ಮನವಿ ಮಾಡುತ್ತಿದ್ದೇನೆ. ತಕ್ಷಣದ ಪ್ರಥಮ ವರ್ತಮಾನ ವರದಿ ಹಾಗೂ ಸಾಕ್ಷಿ ಸಂರಕ್ಷಣೆಯ ವಿನಂತಿ ಮಾಡುತ್ತಿದ್ದೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisements

ಎಸ್‌ಪಿಯವರಿಗೆ ಸಲ್ಲಿಸಿದ್ದೆನ್ನಲಾದ ಸುಮಾರು ಆರು ಪುಟಗಳ ದೂರನ್ನು ವಕೀಲರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಆ ವ್ಯಕ್ತಿಯ ಹೆಸರನ್ನು ಇನ್ನೂ ಕೂಡ ಬಹಿರಂಗಗೊಳಿಸಿಲ್ಲವಾದರೂ, ‘ಆ’ ವ್ಯಕ್ತಿ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದರು ಎಂದು ಖಾತ್ರಿಪಡಿಸಿದೆ. ಅಲ್ಲದೇ, ಅವರು 1995ರಿಂದ 2014ರ ಡಿಸೆಂಬರ್‌ ವರೆಗೆ ಉದ್ಯೋಗದಲ್ಲಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಅತ್ಯಂತ ಭಾರವಾದ ಹೃದಯದಿಂದ ಹಾಗೂ ಪರಿಹಾರವಾಗದ ಪಾಪಪ್ರಜ್ಞೆಯಿಂದ ಹೊರಬರುವ ಸಲುವಾಗಿ ಈ ದೂರು ನೀಡುತ್ತಿದ್ದೇನೆ. ನಾನು 11 ವರ್ಷಗಳ ಹಿಂದೆ ಧರ್ಮಸ್ಥಳವನ್ನು ರಾತ್ರೋರಾತ್ರಿ ತೊರೆದೆ; ನನ್ನ ಸಣ್ಣ ಕುಟುಂಬವನ್ನೂ ನನ್ನೊಡನೆ ಎಳೆದೊಯ್ದೆ. ನೆರೆ ರಾಜ್ಯವೊಂದರಲ್ಲಿ ತಲೆಮರೆಸಿಕೊಂಡೆ. ಧರ್ಮಸ್ಥಳದಿಂದ ದೂರವಿದ್ದರೂ, ನಾನು ಮತ್ತು ನನ್ನ ಕುಟುಂಬ ಯಾವುದೇ ಕ್ಷಣದಲ್ಲಿ ಹಿಂದಿನವರಂತೆಯೇ ಕೊಲೆಗೊಳಗಾಗುತ್ತೇವೆ ಎಂಬ ಖಚಿತತೆ ನಮ್ಮನ್ನು ದಿನನಿತ್ಯ ಕಾಡಿದೆ” ಎಂದು ಅನಾಮಧೇಯ ವ್ಯಕ್ತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಹೇಳುತ್ತಿರುವುದರ ಪುರಾವೆಯಾಗಿ, ಇತ್ತೀಚೆಗೆ ಧರ್ಮಸ್ಥಳದಲ್ಲಿ ಮೃತದೇಹ ಹೂಳಿದ್ದ ಸ್ಥಳವೊಂದಕ್ಕೆ ರಹಸ್ಯವಾಗಿ ಹೋಗಿ ಕಳೇಬರವನ್ನು ಹೊರತೆಗೆದಿದ್ದೇನೆ” ಎಂದೂ ಕೂಡ ‘ಆ’ ವ್ಯಕ್ತಿಯು ವಕೀಲರ ಮೂಲಕ ಎಸ್‌ಪಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

“ಆರೋಪಿತರ ಹೆಸರುಗಳು ಮತ್ತು ಅಪರಾಧಗಳಲ್ಲಿ ಅವರ ನಿಖರ ಪಾತ್ರವನ್ನು ಪೊಲೀಸರಿಗೆ ತಿಳಿಸುವ ಮುನ್ನವೇ ನಾನು ಕೊಲೆಯಾದರೆ ಇಲ್ಲವೇ ಅಲಭ್ಯವಾಗಿ ಹೋದರೆ, ನಡೆದಿರುವ ಸತ್ಯವು ನನ್ನೊಡನೆಯೇ ನಾಶವಾಗದಿರಲೆಂದು ಮುಂದುವರೆದ ದೂರನ್ನು ನನ್ನ ಸಹಿ ಹಾಕಿ, ಸುಪ್ರೀಂ ಕೋರ್ಟಿನ ವಕೀಲರಾದ ಕೆ.ವಿ. ಧನಂಜಯ್ ರವರಿಗೆ ನೀಡಿರುತ್ತೇನೆ” ಎಂದು ಎಸ್‌ಪಿಯವರಿಗೆ ಸಲ್ಲಿಸಿರುವ ಆರು ಪುಟಗಳ ದೂರಿನ ಕೊನೆಯಲ್ಲಿ ಉಲ್ಲೇಖಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X