ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ ಆದೇಶ ಹೊರಡಿಸಿದ್ದಾರೆ.
ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆಯನ್ವಯ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ಲಕ್ಷ್ಯ ತೋರಿಸಿದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೊಪ್ಪಳ | ಪತ್ರಕರ್ತರಿಗೆ ನೈತಿಕತೆ ಮುಖ್ಯ: ಶಿವಕುಮಾರ್ ಮೆಣಸಿನಕಾಯಿ