ಬೆಳಗಾವಿ | ಮನರೇಗಾ ಅಕ್ರಮ; ಗ್ರಾಮ ಪಂ. ಪಿಡಿಒ, ಮಾಜಿ ಅಧ್ಯಕ್ಷರಿಗೆ ದಂಡ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ), ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ಅಂದಿನ ಅಧ್ಯಕ್ಷರಿಗೆ ದಂಡ ವಿಧಿಸಿ ಜಿಲ್ಲಾ ಪಂಚಾಯತಿ ಓಂಬಡ್ಸ್‌ಮನ್ ತೀರ್ಪು ನೀಡಿದ್ದಾರೆ.

2020-21ನೇ ಸಾಲಿನಲ್ಲಿ ಮನರೇಗಾ ಅಡಿ ಕೊಟ್ಟಿಗೆ ನಿರ್ಮಾಣ ಮಾಡಿರುವುದಾಗಿ ರೈತರೊಬ್ಬರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಪಂಚಾಯತಿ ಅಧಿಕಾರಿ ಮತ್ತು ಅಂದಿನ ಅಧ್ಯಕ್ಷರು ಅಕ್ರಮ ಎಸಗಿದ್ದರು. ಸಾಮಾಜಿಕ ಕಾರ್ಯಕರ್ತರ ಶ್ರಿನಿವಾಸಗೌಡ ಪಾಟಿಲ್ ಅವರು ಆರ್‌ಐಟಿ ಮೂಲಕ ಅಕ್ರಮವನ್ನು ಬಯಲಿಗೆಳೆದಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತಿಗೆ ದೂರು ನೀಡಿದ್ದರು. ಈ ಬಗ್ಗೆ ಈದಿನ.ಕಾಮ್‌ ಕೂಡ ಸುದ್ದಿ ಮಾಡಿ, ಮೇಲಧಿಕಾರಿಗಳ ಗಮನ ಸೆಳೆದಿತ್ತು.

ಪ್ರಕರಣದ ತನಿಖೆ ನಡೆಸಿದ ಓಂಬಡ್ಸ್‌ಮನ್ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ವರದಿ ನೀಡಿದ್ದಾರೆ. ಅಕ್ರಮ ಎಸಗಿದ್ದ ಪಿಡಿಒ ಎಂ.ಡಿ ಬಡಿಗೇರ ಮತ್ತು ತಾಂತ್ರಿಕ ಸಹಾಯಕ ಅಭಿಯಂತರರಿಗೆ ತಲಾ 6,417ರೂಪಾಯಿ ಹಾಗೂ ಅಂದಿನ ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ರಾ ಲಮಾಣಿ ಅವರಿಗೆ 6,416 ರೂಪಾಯಿ ದಂಡ ವಿಧಿಸಿದ್ದಾರೆ.

Advertisements

ಅಕ್ರಮದ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸಗೌಡ ಪಾಟಿಲ್, “ಗ್ರಾಮ ಪಂಚಾಯಿತಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದರು. ಅವರಿಗೆ ಶಿಕ್ಷೆ ವಿಧಿಸಿರುವುದು ಸಂತೋಷವಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X