ಗದಗ | ನೂತನ ಅಧಿಕಾರಿಗಳಿಗೆ‌ ಶಿಷ್ಯರಿಂದ ಸನ್ಮಾನ

Date:

Advertisements

ಗದಗ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಜಿಲ್ಲಾ ಅಧಿಕಾರಿಯಾಗಿ ನೇಮಕವಾಗಿರುವ ರವಿ ಎಲ್ ಗುಂಜೀಕರ್ ಮತ್ತು ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಸವರಾಜ ವಿ ಬಳ್ಳಾರಿ ಅವರಿಗೆ ಅವರ ಹಳೆಯ ವಿದ್ಯಾರ್ಥಿಗಳು ಶುಭಕೋರಿ, ಸನ್ಮಾನ ಮಾಡಿದ್ದಾರೆ.

ಈ ಇಬ್ಬರೂ ಅಧಿಕಾರಿಗಳು ಈ ಹಿಂದೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಆ ವೇಳೆ, ಅವರ ವಿದ್ಯಾರ್ಥಿಗಳಾಗಿದ್ದ ಹಲವರು ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಬಹಳಷ್ಟು ಸಹಾಯ, ಸಹಕಾರ ಮಾಡುತ್ತಾ ಬಂದಿರುವ ಈ ಇಬ್ಬರು ಅಧಿಕಾರಿಗಳು ಇನ್ನೂ ಮುಂದಿನ ದಿನಗಳಲ್ಲಿ ಬಡವರ ಮತ್ತು ನೊಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಹಾಯ ಮಾಡಬೇಕೆಂದು ಆಶಿಸಿದರು.

Advertisements

ಈ ಸಂಧರ್ಭದಲ್ಲಿ ವಕೀಲರಾದ ಮೈಲಾರಪ್ಪ ಡಿ ಎಚ್, ಗುತ್ತಿಗೆದಾರರಾದ ಮಾರುತಿ ಜಿ ಎಚ್, ಸಮಾಜಿಕ ಕಾರ್ಯಕರ್ತರಾದ ವಿಶ್ವನಾಥ ದಲಾಲಿ, ಪರಶುರಾಮ ತಳವಾರ, ಮುತ್ತು ಮ್ಯಾಗೇರಿ, ಸುರೇಶ ಹಾಳಕೆರಿ, ಲೋಕೇಶ ಬಂಡಿವಡ್ಡರ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X