ಶಿವಮೊಗ್ಗ | ಮನುಷ್ಯ ಮತ್ತು ಕಾಡಿನ ಸಂಬಂಧವೇ ‘ತಿಮ್ಮನ ಮೊಟ್ಟೆಗಳು’ ಸಿನೆಮಾ : ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ

Date:

Advertisements

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮನುಷ್ಯ ಮತ್ತು ಕಾಡಿನ ನಡುವಿನ ಸಂಬಂಧಗಳನ್ನು ಚಲನಚಿತ್ರದ ಮೂಲಕ ಮಾತನಾಡತ್ತ, ಮಲೆನಾಡಿನ ಕಾಡನ್ನು ಸಂರಕ್ಷಿಸುವ ಕಥಾ ಹಂದರವೇ ತಿಮ್ಮನ ಮೊಟ್ಟೆಗಳು ಸಿನೆಮಾವಾಗಿದೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ,ಮಲೆನಾಡಿನ ಕಥಾಹಂದರದೊಂದಿಗೆ ಮಲೆನಾಡಿನ ಕಾಡಿನಲ್ಲಿ ಚಿತ್ರಿಕರಣಗೊಂಡು, ಮಲೆನಾಡಿನ ಕಲಾವಿದರು ನಟಿಸಿದ ಸಿನೆಮಾ ಇದಾಗಿದೆ ಎಂದರು, ಮಲೆನಾಡ ಕಾಡಿನಲ್ಲಿರುವ ಕಾಳಿಂಗ ಹಾವನ್ನು ಕೇಂದ್ರವಾಗಿರಿಸಿಕೊಂಡು ಪ್ರಕೃತಿ ಮತ್ತು ಮನುಷ್ಯರ ನಡುವಿನ ವಿಭಿನ್ನ ದೃಷ್ಟಿಕೋನವನ್ನು, ದ್ವಂದ್ವ ನಿಲುವನ್ನು ಈ ಸಿನೆಮಾ ಬಿಂಬಿಸುತ್ತದೆ ಎಂದರು.

ಮನುಷ್ಯನಿಂದು ಕಾಡುಗಳ ನಡುವೆ ಬೆಳೆಸಿಕೊಂಡ ನಂಬಿಕೆ ಮತ್ತು ಮೌಢ್ಯ ವಿಭಿನ್ನ ರೂಪ ಪಡೆದುಕೊಳ್ಳುತ್ತಿದೆ, ಮಲೆನಾಡಿನ ಕಾಡನ್ನು ಸಂರಕ್ಷಿಸುವ ಉದ್ದೇಶವನ್ನು ಸಿನೆಮಾದಲ್ಲಿ ಹೆಚ್ಚು ಒತ್ತು ನೀಡಿದ್ದೇನೆ ಎಂದರು.

Advertisements

ಈಗಾಗಲೇ ಅಂತರಾಷ್ಟ್ರೀಯ ಚಲಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಹೆಸರಾಂತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಹಾಗೂ ಪಿ.ಶೇಷಾದ್ರಿಯವರಿಂದ ಪ್ರಶಂಸೆಗೆ ಪಾತ್ರವಾಗಿದೆ ಎಂದರು.

ಕಾರ್ಯಕಾರಿ ನಿರ್ಮಾಪಕ ವಿನಯ್ ಕಣಿವೆ ಮಾತನಾಡಿ, ಮಲೆನಾಡ ಕಾಡಿನಲ್ಲಿನ ಸಂಸ್ಕೃತಿ, ವಿಕೃತಿ, ಮೌಢ್ಯ, ನಂಬಿಕೆಗಳ ಚಿತ್ರಣ ಈ ಸಿನೆಮಾದಲ್ಲಿದೆ, ಮಲೆನಾಡಿಗರು ಈ ಸಿನೆಮಾವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದರು.

ಈ ಗೋಷ್ಠಿಯಲ್ಲಿ ಕಲಾವಿದರಾದ ಕೇಶವ ಗುತ್ತಳಿಕೆ, ಸಂದೀಪ್ ಕುಂದಾದ್ರಿ, ಹರ್ಷ, ಸೂರಜ್, ಪ್ರೇಮ್ ಯಡೂರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X