ಶಿವಮೊಗ್ಗ | ಭದ್ರಾವತಿಯಲ್ಲಿ ರೈತ ಸಂಘದಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಎರಡು ಗುಡ್ಡಗಳ ನಡುವೆ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಾಮಾಗಾರಿ ಮಾಡುತ್ತಿರುವುದನ್ನು ಕೂಡಲೆ ನಿಲ್ಲಿಸಬೇಕು ಎಂದು ತಾಲೂಕು ರೈತ ಸಂಘದ ಮುಖಂಡ ಹಾಗೂ ವಲಯ ಕಾರ್ಯದರ್ಶಿ ವೀರೇಶ್ ಆಗ್ರಹಿಸಿದರು.

ಇವರುಗಳು ತಾಲೂಕು ಕಚೇರಿ ಮುಂದೆ ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಭದ್ರಾ ಜಲಾಶಯಕ್ಕೆ ರಕ್ಷಣೆಯಿಲ್ಲವಾಗಿದೆ. ಜಲಾಶಯದ ಎರಡು ಗುಡ್ಡಗಳ ನಡುವೆ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞನಿಕವಾಗಿ ಕಾಮಾಗಾರಿ ಮಾಡುತ್ತಿರುವುದು ಖಂಡನೀಯ ಎಂದರು.

ಈ ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘ ಕಳೆದ ೧೫ ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರು ಜನ ಪ್ರತಿನಿಧಿಗಳು ಅಧಿಕಾರಿಗಳು ನಿರ್ಲಕ್ಷ ತಾಳಿರುವುದು ಹೇಯ ಕೃತ್ಯವಾಗಿದೆ ಎಂದರು.

Advertisements

ಆದ್ದರಿಂದ ಸರ್ಕಾರವನ್ನು ಎಚ್ಚರಿಸಲು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದರು. ನೀರನ್ನು ಜೋಪಾನವಾಗಿ ನಿರ್ವಹಣೆ ಮಾಡಬೇಕಾದ ನೀರಾವರಿ ಇಲಾಖೆ ಅಧಿಕಾರಿಗಳು ಈ ರೀತಿ ಭದ್ರಾ ಬಲದಂಡೆಯನ್ನು ಸೀಳಿ ಬಫರ್ ಜೋನ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಾಮಾಗಾರಿ ಮಾಡುತ್ತಿರುವುದು ಪ್ರಕೃತಿಗೆ ಮತ್ತು ರೈತರಿಗೆ, ಸಾರ್ವಜನಿಕರಿಗೆ ಮಾಡುತ್ತಿರುವ ದ್ರೋಹವಾಗಿದೆ. ಕಾಮಗಾರಿಯನ್ನು ನಿಲ್ಲಿಸುವುದರ ಜೊತೆಗೆ ನೀರು ವ್ಯರ್ಥವಾಗಿ ಸೋರಿಕೆಯಾಗದಂತೆ ಎಜಿನಿಯರ್‌ಗಳು ಉತ್ತಮ ತಂತ್ರ ಜ್ಞಾನದ ಮೂಲಕ ಸದೃಢವಾದ ತಡೆಗೋಡೆಯನ್ನು ನಿರ್ಮಿಸುವಂತೆ ರೈತ ಸಂಘ ಆಗ್ರಹಿಸುತ್ತದೆ ಎಂದರು.

ತಹಶೀಲ್ದಾರ್ ಪರಸಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಪರಸಪ್ಪ ಮನವಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಹಿರಣ್ಣಯ್ಯ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಶಾಖೆಯ ಮುಖಂಡರುಗಳು, ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X