ಅಪರಾಧಿ ಪ್ರಜ್ಞೆ | ಕೊಲೆಗೈದು 39 ವರ್ಷಗಳ ಬಳಿಕ ಪೊಲೀಸರಿಗೆ ಶರಣಾದ ವ್ಯಕ್ತಿ

Date:

Advertisements

1986ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಅಪರಾಧಿ ಪ್ರಜ್ಞೆ ಕಾಡಿದ್ದು, ಆರೋಪಿಯು ಇದೀಗ ಪೊಲೀಸರ ಎದುರು ತಪ್ಪೊಪ್ಪಿಕೊಂಡು ಶರಣಾಗಿರುವ ಘಟನೆ ಕೇರಳದ ಕೋಝಿಕೋಡ್‌ನಲ್ಲಿ ನಡೆದಿದೆ.

ಶರಣಾಗಿರುವ ಆರೋಪಿಯನ್ನು ಮುಹಮ್ಮದ್ ಆಲಿ ಎಂದು ಹೇಳಲಾಗಿದೆ. 39 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಕೃತ್ಯದಲ್ಲಿ ಅವರು ಭಾಗಿಯಾಗಿದ್ದರು. ತಾವು ಕೃತ್ಯ ಎಸಗಿದ್ದ ಬಗ್ಗೆ ಆಲಿ ರಹಸ್ಯವನ್ನು ಕಾಪಾಡಿಕೊಂಡು ಬಂದಿದ್ದರು. ಆದರೆ, ಅವರ ಕೃತ್ಯವು ನಿರಂತರವಾಗಿ ಅವರನ್ನು ಕಾಡುತ್ತಿತ್ತು. ಅಪರಾಧಿ ಭಾವ ಹೆಚ್ಚಾಗಿದ್ದರಿಂದ, ಇದೀಗ ಅವರು ಮಲಪ್ಪುರಮ್ ಜಿಲ್ಲೆಯ ವೆಂಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ತಾನು 14 ವರ್ಷ ವಯಸ್ಸನವನಿದ್ದಾಗ ಕೊಲೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

1986ರಲ್ಲಿ ಆಲಿ ಅವರು ಕೋಝಿಕೋಡ್ ಜಿಲ್ಲೆಯ ತಿರುವಂಬಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡರಂಜಿ ಗ್ರಾಮದ ದೇವಸ್ಯ ಎಂಬವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಆಗ, “ವ್ಯಕ್ತಿಯೊಬ್ಬರು ತನಗೆ ಕಿರುಕುಳ ನೀಡಿದ್ದರಿಂದ, ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಆತನ ಮೇಲೆ ಪ್ರತಿದಾಳಿ ಮಾಡಿದಾಗ, ಆತ ನೀರು ತುಂಬಿದ್ದ ಹಳಕ್ಕೆ ಬಿದ್ದು ಸಾವನ್ನಪ್ಪಿದ್ದರು” ಎಂದು ಹೇಳಿಕೊಂಡಿದ್ದಾರೆ.

Advertisements

“ಘಟನೆಯಿಂದ ಗಾಬರಿಗೊಂಡು ನಾನು ಅಲ್ಲಿಂದ ಓಡಿ ಹೋದೆ. ಎರಡು ದಿನಗಳ ಬಳಿಕ ವಾಪಸ್‌ ಬಂದಾಗ, ಆತನ ಮೃತದೇಹ ಹಳ್ಳದಲ್ಲೇ ಇತ್ತು. ಪೊಲೀಸರು ಆತನನ್ನು ಸಹಜ ಸಾವೆಂದು ಪ್ರಕರಣ ದಾಖಲಿಸಿದ್ದರು. ಯಾವುದೇ ಸುಳಿವು ಸಿಗದೆ ಪ್ರಕರಣ ಮೂಲೆಗೆ ಸರಿಯಿತು. ಆದರೆ, ಭಯದಿಂದ ನಾನು ಸತ್ಯವನ್ನು ಮುಚ್ಚಿಟ್ಟಿದ್ದೆ” ಎಂದು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ಮೇಲೆ ಗಂಭೀರ ಆರೋಪ: ಕ್ಲಿನಿಕಲ್ ಪ್ರಯೋಗಕ್ಕೆ ಬಡರೋಗಿಗಳ ಬಳಕೆ

ಆದಾಗ್ಯೂ, “ನನಗೆ ದಿನನಿತ್ಯ ಅಪರಾಧಿ ಪ್ರಜ್ಞೆ ಕಾಡುತ್ತಿತ್ತು. ಇತ್ತೀಚೆಗೆ, ನನ್ನ ಮಕ್ಕಳು ಮೃತಪಟ್ಟಾಗ, ನನ್ನ ಅಪರಾಧಿ ಭಾವದ ಕಟ್ಟೆಹೊಡೆಯಿತು. ನಾನು ನೆಮ್ಮದಿಯಿಂದ ಬದುಕಬೇಕೆಂದರೆ ನನ್ನ ತಪ್ಪನ್ನು ಒಪ್ಪಿಕೊಳ್ಳಬೇಕು. ಪರಿಶುದ್ಧನಾಗಿ ಮನೆಗೆ ಮರಳಬೇಕು ಎನಿಸಿದೆ. ಅದಕ್ಕಾಗಿ, ಶರಣಾಗುತ್ತಿದ್ದೇನೆ” ಎಂದು ಆಲಿ ಹೇಳಿದ್ದಾರೆ.

ಅವರ ಹೇಳಿಕೆಯನ್ನು ಪರಿಗಣಿಸಿರುವ ಪೊಲೀಸರು, ಆಲಿ ಅವರನ್ನು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮೃತರ ಗುರುತು ಪತ್ತೆಗಾಗಿ ಪರಿಶೀಲನೆ-ತನಿಖೆ ನಡೆಸುತ್ತಿದ್ದಾರೆ. ಆಲಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X