ನಟಿ ರನ್ಯಾ​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Date:

Advertisements

ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿ​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಅರ್ಕಾವತಿ ಬಡಾವಣೆಯಲ್ಲಿ ಇರುವ ರಾನ್ಯಾ ರಾವ್ ಅವರ ನಿವೇಶನ, ವಿಕ್ಟೋರಿಯಾ ಲೇಔಟ್​ನಲ್ಲಿರುವ ಮನೆ, ಆನೇಕಲ್‌ ಮತ್ತು ತುಮಕೂರು ಬಳಿಯ ಅವರ ಕೃಷಿ ಜಮೀನುಗಳನ್ನು ಇಡಿ ಜಪ್ತಿ ಮಾಡಿದೆ.

ಇದೇ ವರ್ಷದ ಮಾರ್ಚ್‌ 3ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಡೈರೆಕ್ಟರೇಟ್ ಆಫ್ ರವೆನ್ಯೂ ಇಂಟೆಲಿಜೆನ್ಸ್ (DRI) ಬಂಧಿಸಿತ್ತು. ರನ್ಯಾ ದುಬೈನಿಂದ ಸುಮಾರು 14.2 ಕೆ.ಜಿ ಚಿನ್ನವನ್ನು ಕ್ರಮವಾಗಿ ಬೆಂಗಳೂರಿಗೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಅಂದಿನಿಂದಲೂ ರನ್ಯಾ ಜೈಲಿನಲ್ಲಿಯೇ ಇದ್ದಾರೆ.

ನಟಿ ರನ್ಯಾ ರಾವ್​, ತರುಣ್ ಕೊಂಡೂರು ಹಾಗೂ ಇತರರ ಗುಂಪು ಸಕ್ರಿಯವಾಗಿ ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ರನ್ಯಾ ವಿರುದ್ಧ ಸಿಬಿಐ ಮತ್ತು ಡಿಆರ್‌ಐ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿವೆ. ಸಿಬಿಐ ಮತ್ತು ಡಿಆರ್‌ಐನ ಅನುಮತಿ ಪಡೆದು ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿದೆ. ರನ್ಯಾ ಅವರ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

Advertisements

ಈ ಲೇಖನ ಓದಿದ್ದೀರಾ?: ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ಮೇಲೆ ಗಂಭೀರ ಆರೋಪ: ಕ್ಲಿನಿಕಲ್ ಪ್ರಯೋಗಕ್ಕೆ ಬಡರೋಗಿಗಳ ಬಳಕೆ

ರನ್ಯಾ ಮತ್ತು ಅವರ ತಂಡವು ದುಬೈ ಮತ್ತು ಉಗಾಂಡಾದಿಂದ ಚಿನ್ನವನ್ನು ಖರೀದಿಸಿ, ಹವಾಲಾ ಮೂಲಕ ನಗದು ಪಾವತಿ ಮಾಡುತ್ತಿದ್ದರು. ದುಬೈನಲ್ಲಿ ಚಿನ್ನವನ್ನು ಸ್ವಿಟ್ಜರ್ಲ್ಯಾಂಡ್, ಅಮೆರಿಕಗೆ ತೆಗೆದುಕೊಂಡು ಹೋಗುವುದಾಗಿ ಸುಳ್ಳು ಕಸ್ಟಮ್ಸ್ ಡಿಕ್ಲರೇಷನ್ ಪಡೆಯುತ್ತಿದ್ದರು ಎಂದು ಇ.ಡಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X