ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ ಮಂಜೂರು ಮಾಡಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇನೆಯ ತಾಳಿಕೋಟೆ ತಾಲೂಕು ಸಮಿತಿ ಮುಖಂಡರು ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.

ಸಮಿತಿಯ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಮಾತನಾಡಿ, “ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಇಲ್ಲದಿರುವುದರಿಂದ ಎಷ್ಟೋ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಆಗುತ್ತಿಲ್ಲ. ಆದಷ್ಟು ಬೇಗ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಮಂಜೂರು ಮಾಡಿ ವಿದ್ಯಾರ್ಥಿಗಳ ಪರ ನಿಲುವು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಬಸವರಾಜ ಮದರ್ ಮಾತನಾಡಿ, “ತಾಳಿಕೋಟೆ ಪಟ್ಟಣದಲ್ಲಿ ಸುಮಾರು 25 ಕಾಲೇಜುಗಳಿವೆ. ನೂತನ ತಾಲೂಕಿನಲ್ಲಿ 58 ಹಳ್ಳಿಗಳಿವೆ. ಎಸ್.ಎಸ್.ಎಲ್.ಸಿ ಮುಗಿಸಿದ ವಿದ್ಯಾರ್ಥಿನಿಯರು ಶಿಕ್ಷಣ ಪಡೆಯಲು ವಸತಿ ಸೌಲಭ್ಯ ಇಲ್ಲದ ಕಾರಣ ದಿನಂಪ್ರತಿ ಹಳ್ಳಿಯಿಂದ ಹೋಗಿ ಬರಲು ತೊಂದರೆಯಾಗುತ್ತಿದೆ. ದುಡಿಯಲು ವಲಸೆ ಹೋದ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ ಕಾರಣ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಸಚಿವರರು ಆದಷ್ಟು ಬೇಗನೆ ಪಟ್ಟಣಕ್ಕೆ ಹೊಸ ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರು ಮಾಡಿ ಬಡ ವಿದ್ಯಾರ್ಥಿನಿಯರಿಗೆ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡಬೇಕು” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ವಿವಿ ನೂತನ ಕುಲಪತಿಯಾಗಿ ಪ್ರೊ. ವಿಜಯಾ ಕೋರಿಶೆಟ್ಟಿ ನೇಮಕ

ಈ ಸಂದರ್ಭದಲ್ಲಿ ನಾಗರಾಜ ಗಜಕೋಶ, ಯಮನಪ್ಪ ನಾಯ್ಕೋಡಿ,ಪರಶುರಾಮ್ ತಳವಾರ್,ಭೀಮಾಶಂಕರ್ ಸೋನೋನೆ,ಮೈಬೂಬ್ ಅವಟಿ, ಪರಶುರಾಮ್ ನಾಲತವಾಡ, ಬಾಗಪ್ಪ ಕಟ್ಟಿಮನಿ, ಮಡು ಚಲವಾದಿ, ಶಶಿಕುಮಾರ್ ಚಲವಾದಿ,ಬಸವರಾಜ್ ತೋಟದ, ಸಾಬಣ್ಣ ಕಡದಾಳ,ಶಿವಪ್ಪ ಮಾದರ್ ಹಾಗೂ ಶೇಖಪ್ಪ ಕಟ್ಟಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X